ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಕೊಂಡ ಕನ್ನಡದ ನಟ ರಾಜ್ ಬಿ ಶೆಟ್ಟಿ

ನ್ನಡದ ಹೆಸರಾಂತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಇದೀಗ ಮಲಯಾಳಂ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ರಮ್ಯಾ ನಿರ್ಮಾಣದ ಚೊಚ್ಚಲು ಸಿನಿಮಾದ ಶೂಟಿಂಗ್ ಮುಗಿಸಿರುವ ರಾಜ್, ಮಲಯಾಳಂ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಇದು ಇವರ ಚೊಚ್ಚಲು ಮಲಯಾಳಂ ಸಿನಿಮಾವಾಗಿದ್ದು, ಚಿತ್ರಕ್ಕೆ ರುಧಿರಂ ಎಂದು ಹೆಸರಿಡಲಾಗಿದೆ.

ರುಧಿರಂ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜಿಶೋ ಲೋನ್ ಆಂಟೋನಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಫೆ. 14 ರಂದು ಚಿತ್ರದ ಮುಹೂರ್ತ ನಡೆದಿದೆ. ಇದೀಗ ಚಿತ್ರೀಕರಣವನ್ನು ಆರಂಭಿಸಿದ್ದಾರೆ ನಿರ್ದೇಶಕರು. ರಾಜ್ ಬಿ ಶೆಟ್ಟಿ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದವರು ರಾಜ್ ಬಿ ಶೆಟ್ಟಿ. ಆನಂತರ ಅನೇಕ ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕರಾಗಿ ಕೆಲಸ ಮಾಡಿದವರು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ತಂಡದ ಸಕ್ರೀಯ ಸದಸ್ಯನಾಗಿರುವ ರಾಜ್, ತಮ್ಮದೇ ಆದ ರೀತಿಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಎಲ್ಲದರ ಯಶಸ್ಸೇ ಇಂದು ಅವರನ್ನು ಮಲಯಾಳಂ ಚಿತ್ರರಂಗಕ್ಕೆ ಕರೆದುಕೊಂಡು ಹೋಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

Fri Feb 17 , 2023
ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಶಂಕರ್ ನಾಗ್ ಹೆಸರಿನಲ್ಲಿ ಸರಕಾರ ಸಾಕಷ್ಟು ಕೆಲಸ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿದೆ. ಅದರಲ್ಲೂ ಮೆಟ್ರೋ ನಿಲ್ದಾಣಗಳಿಗೆ ಅವರ ಹೆಸರು ಇಡಬೇಕು, ಶಂಕರ್ ಕನಸಿನ ನಂದಿಬೆಟ್ಟದಲ್ಲಿಯ ರೋಪ್ ವೇ ಚಾಲನೆ ಕೊಡಬೇಕು ಮತ್ತು ಅದಕ್ಕೆ ಶಂಕರ್ ನಾಗ್ ಅವರ ಹೆಸರನ್ನೇ ಇಡಬೇಕು ಎನ್ನುವುದು ಆಗ್ರಹವಾಗಿತ್ತು. ಕೊನೆಗೂ ಅದು ಹಾಗೆಯೇ ಉಳಿದುಕೊಂಡಿದೆ. ಆದರೆ ಈ ಬಾರಿಯ ಬಜೆಟ್ ನಲ್ಲಿ ಸರಕಾರವು ಶಂಕರ್ ಹೆಸರಿನಲ್ಲಿ […]

Advertisement

Wordpress Social Share Plugin powered by Ultimatelysocial