ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಅವನೇ ಶ್ರೀಮನ್ನಾರಾಯಣ, ಕಥೆಯೊಂದು ಶುರುವಾಗಿದೆ ಸೇರಿದಂತೆ ಹಲವು ಸದಭಿರುಚಿಯ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.ಅವರು ನಾಯಕರಾಗಿ ಅಭಿನಯಿಸುತ್ತಿರುವ ಸಿನಿಮಾ ಚಿತ್ರೀಕರಣ ಫೆ.ತಿಂಗಳಲ್ಲಿ ಶುರುವಾಗಲಿದೆ. ಇನ್ನೂ ಹೆಸರಿಡದ ಸಿನಿಮಾಗೆ ಆದಿತ್ಯ ಗುಣವಂತೆ ನಿರ್ದೇಶಕರು ಬಾಲಿವುಡ್ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಆದಿತ್ಯ ಅವರು ಈ ಹಿಂದೆ ಕಪೂರ್ ಅಂಡ್ ಸನ್ಸ್ ಮತ್ತು ವಿಕ್ಕಿ ಕೌಶಲ್ ಅಭಿನಯದ ಭೂತ್ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.ಪುಷ್ಕರ್ ಅವರು ನಾಯಕರಾಗಿ ನಟಿಸುತ್ತಿರುವ ಹೆಸರಿಡದ ಸಿನಿಮಾಗೆ ಪುಷ್ಕರ್ ಅವರೇ ಬಂಡವಾಳ ಹೂಡಿದ್ದಾರೆ. ಸಿನಿಮಾ ಮೂಲಕ ಸಿನಿಮೆಟೊಗ್ರಾಫರ್ ಹರೀಶ್ ಮತ್ತು ಸಂಗೀತ ನಿರ್ದೇಶಕರಾಗಿ ಪ್ರವೀಣ್ ಪಾದಾರ್ಪಣೆ ಮಾಡುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada