ಜೆಡಿಎಸ್​ ಮುಖಂಡ ಬೆಳವಾಡಿ ಶಿವಮೂರ್ತಿ ಮಗ ನೇಣಿಗೆ ಶರಣು

ಜೆಡಿಎಸ್​ ಮುಖಂಡ ಬೆಳವಾಡಿ ಶಿವಮೂರ್ತಿ ಮಗ ನೇಣಿಗೆ ಶರಣು

ಮೈಸೂರು: ಜೆಡಿಎಸ್​ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ (ಡಿ.23) ಮರಟಿಕ್ಯಾತನಹಳ್ಳಿಯ ಅಪಾರ್ಟ್‌ಮೆಂಟ್​ನಲ್ಲಿ ನಡೆದಿದೆ.

ಪ್ರದೀಪ್ (32) ಆತ್ಮಹತ್ಯೆ ಮಾಡಿಕೊಂಡಾತ.

ಬೆಳವಾಡಿ ಶಿವಮೂರ್ತಿ ಅವರು ಜಿಲ್ಲಾ ಜೆಡಿಎಸ್​ನ ಖಜಾಂಚಿ ಆಗಿದ್ದಾರೆ. ಪ್ರದೀಪ್​ ತಾಯಿ ಭಾಗ್ಯ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ. ಇದೀಗ ತಮ್ಮ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಕ್ಕೆ ಬಹುದೊಡ್ಡ ಆಘಾತ ನೀಡಿದೆ.

ಪ್ರದೀಪ್​ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದ ಎಲ್ಲಾ ಪದವೀಧರರಿಗೆ ಸಿಹಿ ಸುದ್ದಿ

Fri Dec 24 , 2021
ಬೆಂಗಳೂರು: ಯಾವುದೇ ಪದವಿಯಲ್ಲಿ ಯಾವುದೇ ವಿಷಯ ಓದಿದ್ದರೂ, ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಕುರಿತಂತೆ ಶಿಕ್ಷಣ ಇಲಾಖೆ ನಿಯಮಾವಳಿಗೆ ತಿದ್ದುಪಡಿ ತಂದಿದೆ. ಅನೇಕ ವಿಷಯಗಳಲ್ಲಿ ಪದವಿ ಪಡೆದು, ಬಿಎಡ್, ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಈ ಮೊದಲು ಆರರಿಂದ ಎಂಟನೇ ತರಗತಿ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಬಿಎಸ್ಸಿಯಲ್ಲಿ ಪಿಸಿಎಂ ಮತ್ತು ಬಿಎ ನಲ್ಲಿ ಇಂಗ್ಲಿಷ್ ಐಚ್ಛಿಕವಾಗಿ ಓದಿದವರಿಗೆ ಮಾತ್ರ ನೇಮಕಾತಿಯಲ್ಲಿ ಅವಕಾಶ ನೀಡುತ್ತಿದ್ದ ಕಾರಣ ಬೇರೆ […]

Advertisement

Wordpress Social Share Plugin powered by Ultimatelysocial