6 ಗಂಟೆಗಳ ಕಾಲ ಖಾರ್ಕಿವ್​ನಲ್ಲಿ ಯುದ್ಧ ನಿಲ್ಲುವಂತೆ ಮಾಡಿದ್ದ ಭಾರತ..! ಇದರ ಹಿಂದಿತ್ತು ಮೋದಿಯವರ ಚಾಣಾಕ್ಷ ನಡೆ

ವಿಶ್ವದ ಯಾವುದೇ ಬಲಿಷ್ಠ ಶಕ್ತಿಗಳು ಮಾಡಲು ಸಾಧ್ಯವಾಗದ ಕೆಲಸವನ್ನು ಭಾರತವು ಸಾಧಿಸಿ ತೋರಿಸಿದೆ. ಹೌದು..! ಬರೋಬ್ಬರಿ ಆರು ಗಂಟೆಗಳ ಕಾಲ ಭಾರತವು ಖಾರ್ಕಿವ್​ನಲ್ಲಿ ಯುದ್ಧ ನಿಲ್ಲುವಂತೆ ಮಾಡಿತ್ತು ಅಂದರೆ ನೀವು ನಂಬಲೇಬೇಕು.ಉಕ್ರೇನ್​ನ ಎರಡನೇ ಅತಿದೊಡ್ಡ ನಗರದಿಂದ ತನ್ನ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು ಭಾರತದ ಉದ್ದೇಶವಾಗಿದ್ದು, ಮಾಸ್ಕೋ ತನ್ನ ಆಕ್ರಮಣವನ್ನು ಕೆಲವು ಗಂಟೆಗಳ ಕಾಲ ನಿಲ್ಲಿಸುವಂತೆ ಮಾಡಿದ ಭಾರತದ ನಡೆ ಹಾಗೂ ವಿಧಾನ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.ಸಾಮಾಜಿಕ ಮಾಧ್ಯಮದಲ್ಲಿ, ಬಳಕೆದಾರರು ಭಾರತದ ಕ್ರಮವನ್ನು ಭಾರತೀಯ ರಾಜತಾಂತ್ರಿಕತೆಯ ಶಕ್ತಿಯ ಪ್ರತಿಬಿಂಬ ಎಂದು ಬಣ್ಣಿಸಿದ್ದಾರೆ. ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು.ಫೆಬ್ರವರಿ 26 ರಂದು ಪ್ರಾರಂಭವಾದ ಆಪರೇಷನ್ ಗಂಗಾ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಕ್ರೇನ್,​ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ಪುಟಿನ್ ಹೇಳಿದ್ದರು ಎನ್ನಲಾಗಿದೆ.ಈ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಅನುಸರಿಸಿದ ಚಾಣಾಕ್ಷ ನಡೆಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಯಶ್ ಅಭಿನಯದ 'ಕೆಜಿಎಫ್ ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದ್ದ, ನಿರ್ಮಾಪಕ;

Thu Mar 3 , 2022
ಹೊಂಬಾಳೆ ಪಿಕ್ಚರ್ಸ್ ನಿರ್ಮಿಸಿರುವ ‘ಕೆಜಿಎಫ್: ಅಧ್ಯಾಯ 2’ 100 ಕೋಟಿ ಬಜೆಟ್‌ನಲ್ಲಿ ತಯಾರಾಗಿದೆ. ಪ್ಯಾನ್-ಇಂಡಿಯಾ ಕ್ರೇಜ್ ಅನ್ನು ಸ್ವಾಧೀನಪಡಿಸಿಕೊಂಡ ನಂತರ, ‘ಕೆಜಿಎಫ್ – ಅಧ್ಯಾಯ 1’ ದೇಶದ ಅತಿದೊಡ್ಡ ಹಿಟ್‌ಗಳಲ್ಲಿ ಒಂದಾಗಿದೆ. ಈಗ ಫ್ರಾಂಚೈಸ್ ಅದರ ಸೀಕ್ವೆಲ್ ಬಿಡುಗಡೆಗೆ ಸಜ್ಜಾಗುತ್ತಿದೆ, ಈ ಚಿತ್ರವು ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಯಶ್ ರಾಕಿ ಎಂಬ ಭೂಗತ ಪಾತಕಿಯಾಗಿ ಕಾಣಿಸಿಕೊಂಡರೆ, ಸಂಜಯ್ ದತ್ ಅಧೀರಾ, ರವೀನಾ ಟಂಡನ್ […]

Advertisement

Wordpress Social Share Plugin powered by Ultimatelysocial