ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ `ಕರಿ ಹೈದ ಕರಿ ಅಜ್ಜ’ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರದ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ್ ,ಚಿತ್ರೀಕರಣ ಸಂದರ್ಭದಲ್ಲಿ ಸಾಕಷ್ಟು ಪವಾಡ ನಡೆದಿವೆ. ಕೊರಗಜ್ಜ ಎಂದು ಕರೆಯುವ ಕರಾವಳಿಭಾಗದ ಆದಿವಾಸಿಗಳು ಎನ್ನಬಹುದಾದ ಕೊರಗ ಜನಾಂಗದ ಹುಡುಗ ದೈವತ್ವ ಪಡೆದುಕೊಂಡ ರೋಚಕ ಕಥೆ ಉಳ್ಳ ಚಿತ್ರ.ಮಂಗಳೂರಿನ ನೇತ್ರಾವತಿ ನದಿ ತಟದಲ್ಲಿರುವ “ಕಲ್ಲಾಪು ಬೂರ್ದಗೋಳಿ” ಬಳಿ ಕೊರಗಜ್ಜನ ಜೊತೆ ಗುಳಿಗ ದೈವ ಇದೆ. ಗುಳಿಗ ನರ್ತನದ ರೀತಿ ತೋರಿಸಲಾಗಿದ್ದು ಅಂತರಾಷ್ಟ್ರೀಯ ಕಲಾವಿದ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ.12ನೇ ಶತಮಾನದ ಕಥೆ ಇದಾಗಿದ್ದು ಯಾರ ಭಾವನೆಗೂ ಧಕ್ಕೆ ಆಗದ ರೀತಿ ಚಿತ್ರೀಕರಣ ಮಾಡಿದ್ದೇವೆ ಎಂದರು.ಹಿರಿನಟಿ ಶ್ರುತಿ ದೈವದ ಕಥೆ ಅದ್ಭುತವಾಗಿದೆ. ಯಾರಿಗೂ ಸಿಗದೆ ಇರುವ ಅವಕಾಶ ತಂಡಕ್ಕೆ ಸಿಕ್ಕಿದೆ.ಇದರಲ್ಲಿ ಬರುವ ಪ್ರತಿಯೊಬ್ಬರ ಪಾತ್ರ ಪೇಂಟಿಂಗ್ ತರಹ ಇದೆ. ಮೈರಕ್ಕೆ ಬೈದ್ಯೆದಿ ಪಾತ್ರ ಕೊರಗಜ್ಜ ಸಾಕು ತಾಯಿ ಕಳ್ಳು ಮಾರುವವಳ ಪಾತ್ರ ಮಾಡುತ್ತಿರುತ್ತೇನೆ. ತಾಯಿ ಮಗನ ಬಾಂಧವ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ ಎಂದರು. ಮತ್ತೋರ್ವ ನಟಿ ಭವ್ಯ ಚಿತ್ರೀಕರಣದ ಅನುಭವ ವಿಶೇಷವಾಗಿತ್ತು ಎಂದರೆ ನಟ ಸಂದೀಪ್ ಸೋಪರ್ಕರ್ ಪಾತ್ರದ ಬಗ್ಗೆ ಮಾಹಿತಿ ನೀಡಿದರು.ನಿರ್ಮಾಪಕ ತ್ರಿವಿಕ್ರಮ ಸಪಲ್ಯ, ಸೋಮೇಶ್ವರ, ಉಲ್ಲಾಳ, ಮಡಂತ್ಯಾರ್, ಪೇರೂರು, ಅಡ್ಯಾರ್, ಎರ್ಮಾಯ್ ,ಸಾರಪಲ್ಲ, ಅರ್ಕುಳ, ಮಂಗಳೂರು ಮುಂತಾದ ಸ್ಥಳದಲ್ಲಿ ಚಿತ್ರೀಕರಣ ಮಾಡಲಾಗಿದೆ ಮೇ ತಿಂಗಳಲ್ಲಿ ತೆರೆಗೆ ತರುವ ಉದ್ದೇಶವಿದೆ. ಪ್ರಮುಖ ಪ್ರಾತ್ರವೊಂದರಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ ನಟಿಸಿದ್ದಾರೆ. ನಾಯಕನಾಗಿ ಭರತ್ ಸೂರ್ಯ ನಾಯಕಿಯಾಗಿ ವೃತಿಕಾ ಅಭಿನಯಿಸಿದ್ದಾರೆ ಕನ್ನಡ, ತುಳು ಹಾಗೂ ಮಲಯಾಳಂ ಭಾಷೆಯಲ್ಲಿ ಬರಲಿದೆ ಎಂದರು.
https://play.google.com/store/apps/details?id=com.speed.newskannada