ಕಾರಿನಲ್ಲಿ ಹಿಂಬಾಲಿಸಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ಎಂಎಸ್ ವಿದ್ಯಾರ್ಥಿ ಅರೆಸ್ಟ್

ಕಾರಿನಲ್ಲಿ ಹಿಂಬಾಲಿಸಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ಎಂಎಸ್ ವಿದ್ಯಾರ್ಥಿ ಅರೆಸ್ಟ್
ಬಿಹಾರ ಮೂಲದ ವಿಜಯ್ ಭಾರದ್ವಾಜ್, ಬೆಂಗಳೂರಲ್ಲಿ ಎಂಬಿಬಿಎಸ್ ಮುಗಿಸಿ ಕಿಮ್ಸ್ ಕಾಲೇಜಿನಲ್ಲಿ ಎಂಎಸ್ ಓದುತ್ತಿದ್ದಾನೆ. ಆರೋಪಿ ಡಿಸೆಂಬಬರ್ 11 ರ ಬೆಳಗಿನ ಜಾವ 2 ರಿಂದ 4 ಗಂಟೆ ಸುಮಾರಿಗೆ ಕಾರಲ್ಲಿ ಹಿಂಬಾಲಿಸಿ ಯುವತಿ ಜೊತೆಗೆ ಅಸಭ್ಯವರ್ತನೆ ತೋರಿದ್ದ,ಬೆಂಗಳೂರು: ಕಾರಿನಲ್ಲಿ ಹಿಂಬಾಲಿಸಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ ಘಟನೆ ನಡೆದಿದೆ.

ವಿಜಯ್ ಭಾರದ್ವಾಜ್ ಬಂಧಿತ ಆರೋಪಿ.

ಬಿಹಾರ ಮೂಲದ ವಿಜಯ್ ಭಾರದ್ವಾಜ್, ಬೆಂಗಳೂರಲ್ಲಿ ಎಂಬಿಬಿಎಸ್ ಮುಗಿಸಿ ಕಿಮ್ಸ್ ಕಾಲೇಜಿನಲ್ಲಿ ಎಂಎಸ್ ಓದುತ್ತಿದ್ದಾನೆ. ಆರೋಪಿ ಡಿಸೆಂಬಬರ್ 11 ರ ಬೆಳಗಿನ ಜಾವ 2 ರಿಂದ 4 ಗಂಟೆ ಸುಮಾರಿಗೆ ಕಾರಲ್ಲಿ ಹಿಂಬಾಲಿಸಿ ಯುವತಿ ಜೊತೆಗೆ ಅಸಭ್ಯವರ್ತನೆ ತೋರಿದ್ದ, ಸದ್ಯ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದು ಕುಡಿದ ಮತ್ತಲ್ಲಿ ಅಸಭ್ಯವಾಗಿ ನಡೆದಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ದೀಪಾ ಶ್ರೀಕುಮಾರ್ ರವರ 21 ವರ್ಷದ ಮಗಳ ಜೊತೆ ವಿಜಯ್ ಭಾರದ್ವಾಜ್ ಅಸಭ್ಯವಾಗಿ ವರ್ತಿಸಿದ್ದ. ಸದ್ಯ ಈಗ ಈತನ ಕಾಟಕ್ಕೆ ಹೈರಾಣಾಗಿದ್ದ ದೀಪಾ ಶ್ರೀಕುಮಾರ್ ಕುಟುಂಬ ನಿಟ್ಟುಸಿರು ಬಿಟ್ಟಿದೆ. ಕಾರಿನಲ್ಲಿ ಎಷ್ಟೇ ದೂರ ಹೀಗಿದ್ರು ವಿಜಯ್ ಭಾರದ್ವಾಜ್ ಫಾಲೊ‌ ಮಾಡಿ ಹಿಂಸೆ ಕೊಟ್ಟಿದ್ದ. ಘಟನೆ ಸಂಬಂಧ ದೀಪಾ ಶ್ರೀಕುಮಾರ್ ಕುಟುಂಬ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಕೊಡಗಿನಲ್ಲಿ ಎ. ಮಂಜು ಪುತ್ರನಿಗೆ ಮುಖಭಂಗ

Fri Dec 17 , 2021
ಇಂದು ವಿಧಾನಪರಿಷತ್ 25 ಸ್ಥಾನಗಳ ಫಲಿತಾಂಶ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಕೊಡಗಿನಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದೆ. ಕೊಡಗು ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಪುತ್ರ ಕೆ. ಮಂಥರ್ ವಿರುದ್ಧ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೊಡಗು ಕ್ಷೇತ್ರದಲ್ಲಿ 1229 ಮತ ಚಲಾವಣೆಯಾಗಿತ್ತು. ಕೆ. ಮಂಥರ್, ಮಾಜಿ ಸಚಿವ ಎ. ಮಂಜು […]

Advertisement

Wordpress Social Share Plugin powered by Ultimatelysocial