ಮುಂಗಾರು ಪ್ರವೇಶದ ನಂತರ ನಿರಂತರ ಮಳೆಯಾಗುತ್ತಿದ್ದು, ಎಡೆಬಿಡದೆ ಭಾರೀ ಮಳೆ ಸುರಿಯುತ್ತಲೇ ಇದೆ.ಭಾರೀ ಮಳೆಗೆ ಕೇರಳ-ಕರ್ನಾಟಕ ಗಡಿ ಭಾಗ ಸಾರಡ್ಕ್ದಲ್ಲಿ ಮಣ್ಣು ಕುಸಿತವಾಗಿ ರಸ್ತೆ ಬ್ಲಾಕ್ ಆಗಿರುವುದು.ಕೊಡಗು, ಸುಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪವೂ ಅನುಭವವಾಗಿದ್ದು ಆತಂಕಕ್ಕೆ ಕಾರಣವಾಗಿದೆಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಡಲತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಮಲ್ಪೆಯಲ್ಲಿ ಬಲೆ ಹಾಕಲಾಗಿದೆ.ಈ ಬಾರಿ ನೈಋತ್ಯ ಮಾನ್ಸೂನ್ ಮೇ 29 ರಂದು ಕೇರಳಕ್ಕೆ ಪ್ರವೇಶ ಪಡೆದರೂ, ಅದರ ಪ್ರಗತಿ ಮಂದಗತಿಯಲ್ಲಿದೆ ಈ ಬಾರಿ ದಕ್ಷಿಣ ಪರ್ಯಾಯ ದ್ವೀಪ , ಪೂರ್ವ , ಈಶಾನ್ಯ ಮತ್ತು ಕೇಂದ್ರ ಭಾರತಗಳಲ್ಲಿ ಮಳೆಯ ತೀವ್ರ ಕೊರತೆಯುಂಟಾಗಿದೆ.ಕೊಡಗಿನಲ್ಲಿ ಕಳೆದ ಎರಡು ದಿನಗಳು ಭಾರಿ ಮಳೆ ಸುರಿದಿದ್ದ ಹಿನ್ನೆಲೆ ತಲಕಾವೇರಿ ರಸ್ತೆಯಲ್ಲಿ ಬಂಡೆಗಳು ಉರುಳಿವೆ. ಭಾಗಮಂಡಲದಿಂದ ನಾಲ್ಕು ಕಿಲೋ ಮೀಟರ್ ದೂರದಲ್ಲಿ ಬೆಟ್ಟದಿಂದ ಬಂಡೆ ಉರುಳಿದ್ದು, ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada