ರಾಜ್ಯದ ಗೃಹ ಸಚಿವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಮಾನ ಹಾನಿ !

 

ಬೆಂಗಳೂರು: ರಾಜ್ಯದ ಗೃಹ ಸಚಿವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಮಾನ ಹಾನಿ ಮಾಡಿರುವ ಮತ್ತು ರಾಜ್ಯದ ಗೌರವಕ್ಕೆ ಧಕ್ಕೆ ತಂದಿರುವ ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್ ವಿರುದ್ಧ ಕಾನೂನು ರೀತಿಯ ಪ್ರಕರಣಗಳನ್ನು ದಾಖಲಿಸಿ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಉಪ್ಪಾರಪೇಟೆ ಪೋಲೀಸ್ ಠಾಣೆಗೆ ಬೆಂಗಳೂರು ದಕ್ಷಿಣ, ಬಿಜೆಪಿ.

ಅಧ್ಯಕ್ಷ ಎನ್. ಆರ್ ರಮೇಶ್ ದೂರು ನೀಡಿದರು.

ಏಪ್ರಿಲ್ 11 ರಂದು ಉಪ್ಪಾರಪೇಟೆ ಪೋಲೀಸ್ ಠಾಣೆ ವ್ಯಾಪ್ತಿಯ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆಯಲ್ಲಿ, ಕಾಂಗ್ರೆಸ್‌ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿ. ಕೆ. ಹರಿಪ್ರಸಾದ್ ರವರು ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರ ಬಗ್ಗೆ ಅತ್ಯಂತ ಹಗುರವಾದ ಮತ್ತು ನಿಂದನಾತ್ಮಕವಾದ ಪದಗಳನ್ನು ಬಳಸಿ ಮಾತನಾಡಿದ್ದಾರೆ. ಗೃಹ ಸಚಿವರಿಗೆ ಹೆಂಡ ಕುಡಿಯುವ ಅಭ್ಯಾಸ ಇದೆಯೋ? ಇಲ್ಲವೋ? ಅಥವಾ ಗಾಂಜಾ ಸೇದುವ ಅಭ್ಯಾಸ ಇರಬೇಕು ಎಂದು ಬಹಿರಂಗ ಸಭೆಯಲ್ಲಿ ಮಾತನಾಡಿರುವುದಲ್ಲದೇ, ಆರಗ ಜ್ಞಾನೇಂದ್ರ ರವರು ಅಜ್ಞಾನಿ ಜ್ಞಾನೇಂದ್ರ ಎಂಬ ಪದಗಳನ್ನು ಬಳಸಿ ಮಾತನಾಡಿದ್ದರು.

ಪ್ರಾಮಾಣಿಕ ರಾಜಕೀಯ ಜೀವನವನ್ನು ನಡೆಸುತ್ತಿರುವ ಆರಗ ಜ್ಞಾನೇಂದ್ರರವರ ಬಗ್ಗೆ ಈ ಹಗುರವಾದ ಮತ್ತು ನಿಂದನಾತ್ಮಕವಾದ ಪದಗಳನ್ನು ಬಳಸಿರುವ ಬಿ. ಕೆ. ಹರಿಪ್ರಸಾದ್ ರವರ ಮಾತುಗಳು ಕಾನೂನು ರೀತಿಯ ಅಪರಾಧವಾಗಿರುತ್ತದೆ ಎಂದು ದೂರು ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇವಲ ಶತ್ರುವಿನ ಶತ್ರುವಲ್ಲ, ಭಾರತವು ಶತ್ರುವಿನ ಮಿತ್ರನೊಂದಿಗೂ ಸ್ನೇಹ ಬೆಳೆಸಬೇಕು!!

Wed Apr 13 , 2022
‘ಶತ್ರುವಿನ ಶತ್ರು ಮಿತ್ರ’ ಎಂಬುದು ಹಳೆಯ ಗಾದೆಯಾಗಿದ್ದು, ಎರಡು ಪಕ್ಷಗಳು ಅಥವಾ ರಾಷ್ಟ್ರಗಳು ಸಾಮಾನ್ಯ ಶತ್ರು/ವಿರೋಧಿ ವಿರುದ್ಧ ಎಲ್ಲಾ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಬಹುದು ಎಂದು ಸೂಚಿಸುತ್ತದೆ. ಈ ವಾದವು ಕೌಟಿಲ್ಯನ ಅರ್ಥಶಾಸ್ತ್ರದಲ್ಲಿ ಕ್ರಿಸ್ತಪೂರ್ವ ನಾಲ್ಕನೇ ಶತಮಾನದಷ್ಟು ಹಿಂದಿನ ರಾಜ್ಯಶಾಸ್ತ್ರಕ್ಕೆ ಸಂಬಂಧಿಸಿದ ಬುದ್ಧಿವಂತಿಕೆಯಲ್ಲಿಯೂ ಕಂಡುಬರುತ್ತದೆ. ಈ ವಿಧಾನವು ಬಹುತೇಕ ಎಲ್ಲಾ ದೇಶಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಅಭಿವ್ಯಕ್ತಿಗಳನ್ನು ಕಂಡುಕೊಳ್ಳುತ್ತದೆ ಮತ್ತು ಇದನ್ನು ನಾವು ಮತ್ತು ನಮ್ಮ ವಿರೋಧಿಗಳು ಅಭ್ಯಾಸ ಮಾಡುತ್ತಾರೆ. ಆಧುನಿಕ […]

Advertisement

Wordpress Social Share Plugin powered by Ultimatelysocial