ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಸಚಿವ ಬಿ.ಸಿ.ನಾಗೇಶ್ ಅವರು ಬೆಳಗ್ಗೆ 11 ಗಂಟೆಗೆ ಒಂದು ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಡಿಡಿಪಿಐ, ಬಿಇಒ ಸೇರಿದಂತೆ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗಿಯಾಗಲಿದ್ದು, ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ. ರಾಜ್ಯದ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ್ರೆ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ ಮುಂದಿನ ದಿನಗಳಲ್ಲಿ ಮಕ್ಕಳ ಅರೋಗ್ಯ ಗಮನದಲ್ಲಿ ಇಟ್ಟು ನಿರ್ಧರ ತೆಗೆದುಕೊಳ್ಳಲಿದ್ದಾರೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada