ಕಾಂಗ್ರೆಸ್ ಪಕ್ಷದ ವತಿಯಿಂದ ಬರುವ ಜನೇವರಿ 11 ರಿಂದ ಪ್ರಜಾಧ್ವನಿ ಆರಂಭವಾಗಲಿದೆ ಎಂದು ಕಾಂಗ್ರೆಸ್’ನ ಹಿರಿಯ ನಾಯಕ ,ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ.
ಬಾಗಲಕೋಟೆಯ ನವನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು,ಈ ಮಾಹಿತಿಯನ್ಮ ನೀಡಿದ್ದಾರೆ.
ಜನವೇರಿ11 ರಂದು ಬೆಳಗಾವಿಯ ಟಿಳಕ್ ವಾಡಿಯಿಂದ ಬಸ್ ಮೂಲಕ ಈ ಅಭಿಯಾನ ಆರಂಭವಾಗಲಿದೆ ಎಂದು ತಿಳಿಸಿದ್ರು.
ಬೆಳಗಾವಿಯ ಟಿಳಕ್ ವಾಡಿಗಿ ಈ ಹಿಂದೆ 1924ರಲ್ಲಿ ಮಹಾತ್ಮಾಗಾಮಧಿಯವರು ಭೆಟಿನೀಡಿದ ಸ್ಥಳದಲ್ಲಿ ಮಹಾತ್ಮಾ ಗಾಂಧಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಅಂದು ಬ್ರಿಟಿಷರನ್ನ ತೊಲಗಿಸಿ ಎಂಬ ಘೋಷ ವಾಕ್ಯದಂತೆ,ಇಂದು ಬಿಜೆಪಿ ತೊಲಗಿಸಿ ಎಂಬ ಘೋಷದೊಂದಿಗೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ರು.
ರಾಜ್ಯದೆಲೆಡೆ ಪ್ರಜಾಧ್ವನಿ ಅಭಿಯಾನ ಆರಂಭವಾಗಲಿದೆ ಎಂದು ತಳಿಸಿದ ಅವರಯ
ಜನೇವರಿ 18.ರಂದು ಬಾಗಲಕೋಟೆಯ ನವನಗರದ ಕಾಳಿದಾಸ ಮೈದಾನದಲ್ಲಿ ಸಮಾವೇಶವಮ್ನ ಆಯೋಜಿಸಲಾಗಿದೆ ಎಂದು ತಿಳಿಸಿದ್ರು..
ಮಾಜಿ ಸಿಎಂ ಸಿದ್ಧರಾಮಯ್ಯನವರು ಸೇರಿ, ರಾಜ್ಯದ ಘಟಾನುಘಟಿ ನಾಯಕರು ,ಎಲ್ಲ ಪ್ರಮುಖರು ಬಸ್ ಮೂಲಕ ಅಭಿಯಾನದಲ್ಲಿ ಭಾಗಿಯಾಗಿ ಜನೇವರಿ 18ರಂದು ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದ್ರು.
ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಪ್ರದರ್ಶನ ಹಾಗೂ ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳನ್ನ ಮನೆಮನೆಗಳಿಗೆ ತಲುಪಿಸಲು ಈ ಅಭಿಯಾನ ಆಯೋಜಿಸಲಾಗಿದೆ ಎಂದರು.
ಜನೇವರಿ28ರ ವರೆಗೆ ರಾಜ್ಯಾದ್ಯಂತ ಈ ಅಭಿಯಾನ ಜರುಗಲಿದೆ ಎಂದು ಮಾಹಿತಿ ನೀಡಿದ್ರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲ್,ಮಾಜಿ ಸಚಿವ ಹೆಚ್.ವೈ.ಮೇಟಿ,ಮಾಜಿ ಸಚಿವ ಆರ್.ಬಿ.ತಿಮ್ಮಾಪೂರ್,ಮಾಜಿ ಶಾಸಕ ಜೆ.ಟಿ.ಪಾಟೀಲ್,ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠಸೇರಿ ಹಲವರು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada