ಬೆಳಗಾವಿ: ಡಿಸೆಂಬರ್ 31ರಂದು ಕರ್ನಾಟಕ ಬಂದ್ ಈಗಾಗಲೇ ನಿಗದಿ ಪಡಿಸಲಾಗಿದೆ. ನಿಗದಿಯಂತೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಿಗರೆಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ಬಂದ್ ನಿಗದಿಯಾಗಿ ಹೋಗಿದೆ. ಅದರಲ್ಲಿ ಬದಲಾವಣೆಯ ಮಾತೇ ಇಲ್ಲ. ಕರ್ನಾಟಕ ಬಂದ್ ಗೆ ಎಲ್ಲರೂ ಕೈಜೋಡಿಸಿ. ಡಿಸೆಂಬರ್ 31ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ ಎಂಬುದಾಗಿ ಹೇಳಿದರು.
ಮುಂದುವರೆದು ಮಾತನಾಡಿದಂತ ಅವರು ಡಿಸೆಂಬರ್ 31ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುತ್ತದೆ. ಆ ಬಳಿಕ ಸರ್ಕಾರಕ್ಕೆ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಮನವಿ ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: