ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹೊಸಪೇಟೆ ನಗರಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹೊಸಪೇಟೆ (ವಿಜಯನಗರ): ಇಲ್ಲಿನ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಬುಧವಾರ ‘ಬಿ’ ಫಾರಂ ಸಿಗುವ ನಿರೀಕ್ಷೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಇದ್ದರು.

ಆದರೆ, ಕೊನೆ ಗಳಿಗೆಯಲ್ಲಿ ಟಿಕೆಟ್‌ ಕೈ ತಪ್ಪಿರುವುದರಿಂದ ಹಲವರು ಸ್ವಪಕ್ಷಿಯರ ವಿರುದ್ಧವೇ ಬಂಡಾಯವೆದ್ದು, ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.

ಈಗಾಗಲೇ ಪಕ್ಷದ ನಿರ್ಧಾರವನ್ನು ಬಹಿರಂಗವಾಗಿಯೇ ಟೀಕಿಸಿರುವ ಬಿಜೆಪಿಯ ಬಿಸಾಟಿ ಸತ್ಯನಾರಾಯಣ, ‘ಕಾಂಗ್ರೆಸ್‌ನವರಿಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ’ ಎಂದು ಆರೋಪಿಸಿದ್ದಾರೆ. ಅವರು ಚುನಾವಣಾ ಕಣಕ್ಕೆ ದುಮುಕಿಲ್ಲ. ಆದರೆ, ಅಂತರ ಕಾಯ್ದುಕೊಳ್ಳುವ ಮಾತುಗಳನ್ನು ಆಡಿದ್ದಾರೆ. ಇನ್ನು, ಬಿಜೆಪಿ, ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿರುವ ಅನಿಲ್‌ ಜೋಶಿ ಕೂಡ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಪಕ್ಷ ಅವರನ್ನು ಕಡೆಗಣಿಸಿರುವುದರಿಂದ ಅವರು ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಡೆಲ್ಟಾಗಿಂತಲೂ 70 ಪಟ್ಟು ಹೆಚ್ಚು ಸೋಂಕುಕಾರಕ ಓಮೈಕ್ರಾನ್

Thu Dec 16 , 2021
ಬೀಜಿಂಗ್; ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ವಿಶ್ವದ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್, ಡೆಲ್ಟಾಗಿಂತಲೂ 70 ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದೆ, ಆದರೆ, ರೋಗದ ತೀವ್ರತೆ ಅತ್ಯಂತ ಕಡಿಮೆ ಇದ್ದಂತೆ ತೋರುತ್ತಿದೆ ಎಂದು ಹಾಂಗ್‌ಕಾಂಗ್‌ನ ಹೊಸ ಅಧ್ಯಯನವೊಂದು ಹೇಳಿದೆ.ಡೆಲ್ಟಾ ರೂಪಾಂತರ ತಳಿ ಮತ್ತು ಮೂಲ ವೈರಸ್ ಸಾರ್ಸ್-ಕೋವ್-2ಗೆ ಹೋಲಿಸಿದರೆ ಓಮೈಕ್ರಾನ್ ತಳಿಯು ಮಾನವನ ಶ್ವಾಸನಾಳಕ್ಕೆ 70 ಪಟ್ಟು ಹೆಚ್ಚು ಹರಡುವ ಸಾಮರ್ಥ್ಯ ಹೊಂದಿದೆ ಎಂದು ಹಾಂಗ್‌ಕಾಂಗ್ ಸಂಶೋಧಕರ […]

Advertisement

Wordpress Social Share Plugin powered by Ultimatelysocial