ಅರಕಲಗೂಡು : ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಕನ್ನಡ ಧ್ವಜವನ್ನು ಸುಟ್ಟು ಕನ್ನಡಿಗರಿಗೆ ಅಪಮಾನ ಎಸಗಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಕರವೇ(ಪ್ರವೀಣ್ಶೆಟ್ಟಿಬಣ) ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಬೆಳಗಾವಿಯಲ್ಲಿನ ಎಂಇಎಸ್ ಮತ್ತುಶಿವಸೇನೆ ಸಂಘಟನೆಗಳ ಕಾರ್ಯಕರ್ತರು ಕನ್ನಡಿಗರು,ಕನ್ನಡಭಾಷೆ ವಿರುದ್ಧ ಸಲ್ಲದ ದಬ್ಬಾಳಿಕೆಯನ್ನು ಪ್ರದರ್ಶಿಸುತ್ತಾ ಬಂದಿದ್ದರೂ ಕೂಡ ಸರಕಾರ ಕಾನೂನಾತ್ಮಕವಾಗಿ ಕ್ರಮ ಕೈಗೊಂಡಿಲ್ಲ.ಇದು ಮಿತಿಮೀರಿ ರಾಜ್ಯಧ್ವಜವನ್ನು ಸುಟ್ಟುಹಾಕಿರುವುದು ಇಡೀ ಕನ್ನಡಿಗರಿಗೆ ಮಾಡಿದ ಅಪಮಾನವಾಗಿದೆ.ಕೂಡಲೇ ಕೃತ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಪ್ರತಿಭನಾ ನಿರತರು ಒತ್ತಾಯಿಸಿದರು.ಪಟ್ಟಣದ ಪ್ರವಾಸಿಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಅನಕೃ ವೃತ್ತಮೂಲಕ ಸಾಗಿ ತಹಸೀಲ್ದಾರ್ ಕಚೇರಿ ಆವರಣಕ್ಕೆ ತೆರಳಿ ಕೆಲ ಕಾಲ ಪ್ರತಿಭಟನಾಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಕುಶಾಲ್,ರಾಜ್ಯದ ಸಕಲ ಸೌಕರ್ಯಗಳನ್ನು ಪಡೆದುಕೊಂಡು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಕನ್ನಡ ವಿರೋಧಿ ಸಂಘಟನೆಯನ್ನು ನಿಷೇಧಿಸಬೇಕು.ಮುಂದೆ ಹೀಗಾಗದಂತ್ತೆ ಎಚ್ಚರಿಕೆ ಕ್ರಮವನ್ನು ರಾಜ್ಯ ಸರಕಾರ ಕೈಗೊಳ್ಳಬೇಕೆಂದು ಮನವಿ ಮಾಡಿದರು. ವಿವಿಧ ಬೇಡಿಕೆಗಳುಳ್ಳ ಮನವಿ ಪತ್ರವನ್ನು ತಹಸೀಲ್ದಾರ್ ವೈಎಂ ರೇಣುಕುಮಾರ್ ಅವರಿಗೆ ಸಲ್ಲಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada