ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೇರಿದಂತೆ 15ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಹದೇವ್ ತಳವಾರ್ ನೇತೃತ್ವದಲ್ಲಿ ರಾಯಣ್ಣ ವೃತ್ತದ ಸಮೀಪ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ರಾಜ್ಯ ಹೆದ್ದಾರಿ ತಡೆಯುವ ಪ್ರಯತ್ನ ನಡೆಸಲಾಗಿದೆ.ಪೊಲೀಸರು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರು. ಇದಕ್ಕೆ ಬಗ್ಗದಿದ್ದಾಗ 15ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಮಹದೇವ್ ತಳವಾರ್, ಅಜಂತ, ಎಲ್ಲೋರ, ಕೊಲ್ಲಾಪುರ ದೇವಸ್ಥಾನ ಕಟ್ಟಿದ್ದು ನಾವು. ನಾವು ಯಾವತ್ತೂ ಹೋರಾಟಗಾರರಿಗೆ ಅವಮಾನ ಮಾಡಿಲ್ಲ. ಶಿವಸೇನೆ, ಎಂಇಎಸ್ ನಮಗೆ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.ಡಿಸಿಪಿ ವಿಕ್ರಮ್ ಅಮ್ಟೆ ಅವರು ಕನ್ನಡಪರ ಹೋರಾಟಗಾರರ ಜೊತೆ ಮಾತುಕತೆ ನಡೆಸಿ, ನಿಷೇಧಾಜ್ಞೆ ಜಾರಿಯಲ್ಲಿದೆ. ಶಾಂತಿಯುತ ಪ್ರತಿಭಟನೆಗೂ ಅವಕಾಶವಿಲ್ಲ ಎಂದು ಮನವೊಲಿಸುವ ಯತ್ನ ನಡೆಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada