ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ

ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು..ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡಧ್ವಜ ಸುಟ್ಟ, ಬೆಳಗಾವಿಯಲ್ಲಿ ಕಲ್ಲು ತೂರಾಟ, ಮಹಾರಾಷ್ಟ್ರದಲ್ಲಿ ಕನ್ನಡಿಗರು, ಅವರ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್‌ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆ ನಿಷೇಧಿಸಬೇಕು, ಕನ್ನಡ ಧ್ವಜ ಸುಟ್ಟವರು, ಕನ್ನಡಿಗರ ಮೇಲೆ ದಾಳಿ ನಡೆಸಿದವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು…ಕೆಲ ಕಾಲ ರಸ್ತೆ ತಡೆ ನಡೆಸಿ, ಎಂಇಎಸ್‌, ಶಿವಸೇನೆ, ಮಹಾರಾಷ್ಟ್ರ ಸರ್ಕಾರ, ರಾಜ್ಯ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು…ರಾಜ್ಯಾಧ್ಯಕ್ಷ ಚಾ.ರಾ.ಕುಮಾರ್ ಮಾತನಾಡಿ ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜ ಸುಡುತ್ತಿದ್ದಾರೆ. ಕನ್ನಡಿಗರು, ರಾಜ್ಯದ ವಾಹನಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್‌ ಪುಂಡರು ಸರ್ಕಾರಿ ವಾಹನಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇಷ್ಟೆಲ್ಲ ನಡೆಯುತ್ತಿದ್ದರೂ, ನಮ್ಮ ರಾಜ್ಯದಲ್ಲಿ ಸರ್ಕಾರ ಇದೆಯೋ ಸತ್ತು ಹೋಗಿದೆಯೋ ಎಂಬ ಅನುಮಾನ ಕಾಡುತ್ತಿದೆ…ಸರ್ಕಾರ ಜೀವಂತವಾಗಿದ್ದರೆ ಇಂತಹ ಕೃತ್ಯ ನಡೆಯಲು ಬಿಡುತ್ತಿರಲಿಲ್ಲ. ಸರ್ಕಾರವು ಮರಾಠಿಗರ ಮತಬ್ಯಾಂಕ್‌ಗಾಗಿ ಇಡೀ ರಾಜ್ಯವನ್ನು ಬಲಿ ಕೊಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರರು.ಮರಾಠಿ ಪುಂಡರು ಬೆಳಗಾವಿಗೆ ಬಂದು ವಾಹನಗಳನ್ನು ದ್ವಂಸ ಮಾಡಿದ್ದಾರೆ. ಕನ್ನಡಿಗ ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ್ದಾರೆ. ಇಂತಹ ಪ್ರಕರಣ ಬೇರೆ ರಾಜ್ಯದಲ್ಲಿ ನಡೆದಿದ್ದರೆ, ದೊಡ್ಡ ಹೋರಾಟವೇ ನಡೆಯುತ್ತಿತ್ತು. ಸರ್ಕಾರ ಮಾತ್ರವಲ್ಲ, ವಿರೋಧ ಪಕ್ಷಗಳು ಕೂಡ ಸುಮ್ಮನಿವೆ. ಎಲ್ಲ ಪಕ್ಷಗಳು ರಾಜ್ಯವನ್ನು ಮಾರಾಟ ಮಾಡಲು, ಬಲಿ ಕೊಡಲು ಹೊರಟಿರುವೆ’ ಎಂದು ಕಿಡಿ ಕಾರಿದರು…..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆಯುತ್ತಿರುವ ವ್ಯಾಕ್ಸಿನೇಷನ್ ಮೆಳ

Sun Dec 19 , 2021
ಬಿದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ತಹಸಿಲ್ದಾರ್ ಸಾವಿತ್ರಿ ಸಲಗರ್ ಅವರ ನೆತೃತ್ವದಲ್ಲಿ ವ್ಯಾಕ್ಸಿನೇಷನ್ ಮೆಳ ಆಯೋಜಿಸಲಾಗಿದೆ.. ಬಸವಕಲ್ಯಾಣ ತಹಸಿಲ್ದಾರ್ ಸಾವಿತ್ರಿ ಸಲಗರ್ ಬಸವಕಲ್ಯಾಣ ನಗರದ ತುಂಬಾ ಓಡಾಡಿ ವ್ಯಾಕ್ಸಿನೇಷನ್ ಪಡೆಯದವರಿಗೆ ವ್ಯಾಕ್ಸಿನೇಷನ್ ನೀಡಿದ್ದಾರೆ…ಬಸವಕಲ್ಯಾಣ ನಗರದ ಮಹಾದ್ವಾರ ಮತ್ತು ಎ .ಪಿ.ಎಂ.ಸಿ ಮಾರುಕಟ್ಟೆ ಹಾಗು ಜನಬಿಡುವಿರುವ ಪ್ರದೆಶಗಳಿಗೆ ಪೊಲಿಸ್ ಮತ್ತು ಆರೊಗ್ಯ ಇಲಾಖೆಯಿಂದ ವಾಹನ ಸವಾರರ ವ್ಯಾಕ್ಸಿನೆಷನ್ ಪ್ರಮಾಣಪತ್ರ ಪರಿಶಿಲಿಸಿ ವ್ಯಾಕ್ಸಿನೇಷನ್ ನಿಡುತ್ತಿದ್ಧಾರೆಬಸವಕಲ್ಯಾಣ ನಗರದಲ್ಲಿ ಪ್ರತಿಯೊಂದು ವೃತ್ತದಲ್ಲಿ ಆರೊಗ್ಯ ಇಲಾಖೆಯಿಂದ ವ್ಯಾಕ್ಸಿನೇಷನ್ […]

Advertisement

Wordpress Social Share Plugin powered by Ultimatelysocial