ಸರ್ಕಾರಿ ಬಸ್ಸಿನ ಎಕ್ಸೆಲ್ ಕಟ್ ಆಗಿ ರಸ್ತೆ ಬದಿಯ ಕಂಪೌಂಡ್ ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 18 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ಮಧ್ಯಾಹ್ನ ನಡೆದಿದೆ.ಗದಗ ದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಬಸ್ ಐಟಿಸಿ ಗೋಡೌನ್ ಬಳಿಯಲ್ಲಿ ಏಕಾಏಕಿ ಬಸ್ಸಿನ ಎಕ್ಸೆಲ್ ಕಟ್ ಆದ ಪರಿಣಾಮ ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಐಟಿಸಿ ಗೋಡೌನ್ ಬಳಿಯಲ್ಲಿನ ಕಂಪೌಂಡ್ ಗೆ ಢಿಕ್ಕಿ ಹೊಡೆದಿದೆ.ಸ್ಥಳಕ್ಕೆ ದೌಡಾಯಿಸಿದ ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಸಿಬ್ಬಂದಿಗಳು ಒಳಗಡೆ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆಯುವ ಮೂಲಕ ಅವರನ್ನು ರಕ್ಷಣೆ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಸಿಬ್ಬಂದಿ ಅವರು ಮಾಡಿರುವ ಕೆಲಸಕ್ಕೆ ಈಗ ಪ್ರಶಂಸೆ ವ್ಯಕ್ತವಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada