ಮೈಸೂರು, ಜು.9- ಮಡಿಕೇರಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಲು ಕೇವಲ ಮೂರು ಅಡಿಗಳಷ್ಟೇ ಬಾಕಿ ಇದೆ.
ಕೆಆರ್ಎಸ್ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80, ಇಂದಿನ ನೀರಿನ ಮಟ್ಟ 121.42ಅಡಿ. ಕೆಆರ್ಎಸ್ ಡ್ಯಾಂನಿಂದ 3270ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದೆ.
ಜಲಾಶಯದ ಗರಿಷ್ಠ ನೀರಿನ ಸಂಗ್ರಹ 44.452ಟಿಎಂಸಿ, ಜಲಾಶಯದಲ್ಲಿ ಇಂದಿನ ಸಂಗ್ರಹ 44.873 ಟಿಎಂಸಿ ಸಂಗ್ರವಾಗಿದೆ. ಕಾವೇರಿ ಜಲಾನಯನದ ಪ್ರದೇಶಗಳ ಜನರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskann