ಹೆಡಿಗೊಂಡ ಗ್ರಾಮದಲ್ಲಿ ಘಟನೆ ನಡೆದಿದ್ದು, 29 ವರ್ಷದ ಜಯಪ್ಪ ಬ್ಯಾಡಗಿ ಮೃತ ಯುವಕ.

ಹಾವೇರಿ: ಯುವತಿಯೊಬ್ಬಳ ಪ್ರೀತಿಗೆ ಬಿದ್ದು ಯುವಕನೊಬ್ಬ ಪ್ರಾಣ ಕಳಕೊಂಡಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಯುವಕ.ಈತನ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಪ್ರಶ್ನೆ ಎದುರಾಗಿದೆ.ಕಳೆದ ಐದು ದಿನಗಳ ಹಿಂದೆ ಪ್ರೀತಿಗೆ ಸಂಬಂಧಿಸಿದಂತೆ ಎರಡೂ ಕುಟುಂಬಗಳ ನಡುವೆ ಜಗಳವಾಗಿತ್ತು. ಜಗಳ ವಿಪರೀತಕ್ಕೆ ಹೋಗಿ ಜಯಪ್ಪನನ್ನು ಹುಡುಗಿಯ ಸಂಬಂಧಿಕರು ಮನಸ್ಸಿಗೆ ಬಂದಂತೆ ಥಳಿಸಿದ್ದರು.ಈ ಘಟನೆ ಬೆನ್ನಲ್ಲೆ ರಾತ್ರೋರಾತ್ರಿ ಯುವಕನ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೆಲ್ನೋಟಕ್ಕೆ ಬಾವಿಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇದನ್ನು ಯುವಕನ ಕುಟುಂಬಸ್ಥರು ಅಲ್ಲಗಳೆದಿದ್ದಾರೆ. ನಮ್ಮ ಮಗನನ್ನು ಹುಡುಗಿಯ ಕಡೆಯವರು ಹೊಡೆದು ಬಾವಿಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಅವರೇ ಮಗನ ಕೊಲೆ ಮಾಡಿದ್ದಾರೆಂದು ಪಾಲಕರು ಹೇಳಿದ್ದಾರೆ. .ಸ್ಥಳಕ್ಕೆ ಪೋಲಿಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾಗಿನಲೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೂರ ಶಿಕ್ಷಣ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ

Sun Feb 6 , 2022
ಬೆಂಗಳೂರು ವಿಶ್ವವಿದ್ಯಾಲಯದ (BU) ದೂರ ಶಿಕ್ಷಣ ವಿಭಾಗದಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ದಾಖಲಾದ ಸುಮಾರು 3,500 ವಿದ್ಯಾರ್ಥಿಗಳು ಸುಮಾರು 10 ತಿಂಗಳಿನಿಂದ ತಮ್ಮ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ವಿಳಂಬದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.ಕೆಲವು ಅವಕಾಶಗಳಿಗೆ ಗರಿಷ್ಠ ಅನುಮತಿಸುವ ವಯಸ್ಸನ್ನು ಇನ್ನು ಮುಂದೆ ಪೂರೈಸದ ಕಾರಣ ಅನೇಕರು ಉದ್ಯೋಗಾವಕಾಶಗಳನ್ನು ಕಳೆದುಕೊಂಡಿದ್ದಾರೆ. ಎಲ್ಲರೂ ಮೂಲ ಶೈಕ್ಷಣಿಕ ಕ್ಯಾಲೆಂಡರ್‌ಗೆ ಅನುಗುಣವಾಗಿದ್ದರೆ, ಈ ವಿದ್ಯಾರ್ಥಿಗಳು 2018-19 ರಲ್ಲಿ ಪ್ರವೇಶ ಪಡೆದಿರಬೇಕು ಮತ್ತು 2019-20 ಅಧಿವೇಶನದ ಕೊನೆಯಲ್ಲಿ ಪದವಿ ಪಡೆಯಬೇಕು. […]

Advertisement

Wordpress Social Share Plugin powered by Ultimatelysocial