ಗಣ್ಯರ ಉಪಸ್ಥಿತಿಯಲ್ಲಿ “ಕೇದಾರ್ ನಾಥ್ ಕುರಿಫಾರಂ” ಗೆ ಚಾಲನೆ.

ಕಾಮಿಡಿ ಕಾರ್ಯಕ್ರಮವೊಂದರ ಮೂಲಕ ಮನೆಮಾತಾಗಿರುವ ನಟ ಮಡೇನುರ್ ಮನು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ” ಕೇದಾರ್ ನಾಥ್ ಕುರಿಫಾರಂ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ವಸಂತನಗರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ಮೊದಲ ಸನ್ನಿವೇಶಕ್ಕೆ ಖ್ಯಾತ ನಟ ವಸಿಷ್ಠ ಸಿಂಹ ಆರಂಭ ಫಲಕ ತೋರಿದರು. ನಿರ್ಮಾಪಕ ಪದ್ಮನಾಭ ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕರಾದ ಸಂತು ಹಾಗೂ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿದರು.

ಜೆ.ಕೆ.ಮೂವೀಸ್ ಲಾಂಛನದಲ್ಲಿ ನಟರಾಜ್ ಕೆ.ಎಂ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ರಾಜೇಶ್ ಸಾಲುಂಡಿ ಕಥೆ, ಚಿತ್ರಕಥೆ ಬರೆದಿದ್ದು, ಶ್ರೀನಿವಾಸ್ ಸಾಗರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ “ಶಿರಾಲಿ ಕ್ರಾಸ್” ಚಿತ್ರ ನಿರ್ದೇಶಿಸಿರುವ ನಿರ್ದೇಶಕರಿಗೆ ಇದು ಎರಡನೇ ಚಿತ್ರ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಸನ್ನಿಧಾತ್ ಸಂಗೀತ ನೀಡುತ್ತಿದ್ದಾರೆ. ರಾಕೇಶ್ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

ಮಡೇನುರ್ ಮನು, ಶಿವಾನಿ, ಕರಿಸುಬ್ಬು, ಟೆನ್ನಿಸ್ ಕೃಷ್ಣ, ಮುತ್ತುರಾಜ್(ಕಾಮಿಡಿ ಕಿಲಾಡಿ), ಸುನಂದಾ ಹೊಸಪೇಟೆ, ಮಜಾಭಾರತ ನಿಂಗ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ:

Sun May 1 , 2022
  ಮಂಡ್ಯ: ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ರೈಲು ರಾತ್ರಿ 10.30 ರಲ್ಲಿ ಮೈಸೂರಿನಿಂದ ಹೊರಟಿತ್ತು. ಮಂದಗೆರೆ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ […]

Advertisement

Wordpress Social Share Plugin powered by Ultimatelysocial