ಮಾರ್ಚ್ 12ರಂದು ಲಾಸ್ ಏಂಜಲೀಸ್ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್ನ ಅನೇಕ ದಿಗ್ಗಜರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.
ಎಂ.ಎಂ. ಕೀರವಾಣಿಅವರು ‘ಆರ್ಆರ್ಆರ್’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ.
ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ರೇಸ್ನಲ್ಲಿ ಇರುವುದರಿಂದ ಅವರ ಖ್ಯಾತಿ ವಿಶ್ವ ಮಟ್ಟಕ್ಕೆ ಹಬ್ಬಿದೆ. ಈಗಅವರು ಆಸ್ಕರ್ ವೇದಿಕೆ ಮೇಲೆ ಹಾಡುವ ಆಫರ್ ಕಳೆದುಕೊಂಡಿದ್ದಾರೆ. ಇದಕ್ಕೆ ಅವರ ದೇಹದ ತೂಕ ಕಾರಣವೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.
ಮಾರ್ಚ್ 12ರಂದು ಲಾಸ್ ಏಂಜಲೀಸ್ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾಲಿವುಡ್ನ ಅನೇಕ ದಿಗ್ಗಜರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಅವರೆಲ್ಲರ ಮುಂದೆ ಪರ್ಫಾರ್ಮೆನ್ಸ್ ನೀಡುವ ಅವಕಾಶ ಎಂಎಂ ಕೀರವಾಣಿ ಅವರಿಗೆ ಸಿಕ್ಕಿದೆ ಎನ್ನಲಾಗಿತ್ತು. ಈ ಬಗ್ಗೆ ಕೆಲ ವೆಬ್ಸೈಟ್ಗಳಲ್ಲಿ ಸುದ್ದಿ ಪ್ರಸಾರ ಆಗಿತ್ತು. ಆದರೆ, ಈಗ ಈ ಅವಕಾಶ ಅವರ ಕೈತಪ್ಪಿದೆ. ಗಾಯಕ ರಾಹುಲ್ ಸಿಪ್ಲಿಗುಂಜ್ ಹಾಗೂ ಕಾಲಭೈರವ ಅವರು ಲಾಸ್ ಏಂಜಲೀಸ್ನ ಡಾಲ್ಬಿ ಥಿಯೇಟರ್ನಲ್ಲಿ ‘ನಾಟು ನಾಟು..’ ಸಾಂಗ್ನ ಹಾಡಲಿದ್ದಾರೆ.
ಈ ಮೊದಲು ಕೀರವಾಣಿ ಅವರು ದೇಹದತೂಕದ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಅವರಿಗೆ ಚಿಂತೆ ಕಾಡಿದೆ. ‘ತುಂಬ ಸಮಯದಿಂದ ನಾನು ಆರೋಗ್ಯವನ್ನು ನಿರ್ಲಕ್ಷಿಸಿದೆ. ಗೋಲ್ಡನ್ ಗ್ಲೋಬ್ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತುಕೊಂಡು ಮಾತನಾಡುವುದು ಕೂಡ ನನಗೆ ಸಮಸ್ಯೆ ಆಯಿತು’ ಎಂದು ಅವರು ಹೇಳಿದ್ದರು. ಈ ಕಾರಣಕ್ಕೆ ಅವರು ಈ ಅವಕಾಶ ಕೈ ಬಿಟ್ಟರಾ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಅವರ ಕಡೆಯಿಂದಲೇ ಸ್ಪಷ್ಟನೆ ಬೇಕಿದೆ.
ಎಂಎಂ ಕೀರವಾಣಿ ಅವರು 90ರ ದಶಕದಿಂದ ಚಿತ್ರರಂಗದಲ್ಲಿ ಆಯಕ್ಟೀವ್ ಆಗಿದ್ದಾರೆ. ರಾಜಮೌಳಿ ಸಿನಿಮಾಗಳಿಗೆ ಅವರು ಸಂಗೀತ ಸಂಯೋಜನೆ ಮಾಡುತ್ತಾರೆ. ಹಲವಾರು ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ ಖ್ಯಾತಿ ಅವರಿಗೆ ಇದೆ. ಕನ್ನಡದಲ್ಲಿಯೂ ಕೀರವಾಣಿ ಕೆಲಸ ಮಾಡಿದ್ದಾರೆ. ‘ಅಳಿಮಯ್ಯ’, ‘ಅಪ್ಪಾಜಿ’, ‘ಭೈರವ’, ‘ಸ್ವಾತಿ’, ‘ಕರ್ನಾಟಕ ಸುಪುತ್ರ’, ‘ದೀಪಾವಳಿ’, ‘ಜಮೀನ್ದಾರ್ರು’ ಮುಂತಾದ ಸಿನಿಮಾಗಳಿಗೆ ಅವರು ಸಂಗೀತ ನೀಡಿದ್ದಾರೆ. 2015ರಲ್ಲಿ ಅವರು ಚಿತ್ರರಂಗ ತೊರೆಯಬೇಕು ಎಂದುಕೊಂಡಿದ್ದರು. ಆ ವರ್ಷ ಬಂದ ‘ಬಾಹುಬಲಿ’ ಸಿನಿಮಾ ಹಿಟ್ ಆಯಿತು. ಇದರಿಂದ ಅವರು ಚಿತ್ರರಂಗದಲ್ಲಿ ಮುಂದುವರಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada