ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಮತ್ತು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.
ಯೆಲ್ಲೋ ಅಲರ್ಟ್ ಘೋಷಣೆಯು ರಾತ್ರಿ ಕರ್ಫ್ಯೂ, ಶಾಲೆಗಳು ಮತ್ತು ಕಾಲೇಜುಗಳನ್ನು ಬಂದ್ ಮಾಡುವುದು, ಸಮ-ಬೆಸ ಆಧಾರದ ಮೇಲೆ ಅನಿವಾರ್ಯವಲ್ಲದ ಅಂಗಡಿಗಳನ್ನು ತೆರೆಯುವುದು. ಮೆಟ್ರೋ ರೈಲುಗಳು ಮತ್ತು ಬಸ್ಗಳಲ್ಲಿ ಆಸನ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರ ಪ್ರಯಾಣಿಸಬೇಕು ಎಂಬ ನಿರ್ಬಂಧಗಳನ್ನು ಒಳಗೊಂಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: