ಕೊಂಡೋತ್ಸವ ನೋಡುವಾಗ ಕುಸಿದ ಚಾವಣಿ: ಮಹಿಳೆ ಸಾವು, 25 ಮಂದಿಗೆ ಗಾಯ

ಮಂಡ್ಯ: ಮನೆಯ ಮೇಲೆ ನಿಂತು ಗ್ರಾಮದೇವತೆ ಹಬ್ಬದ ಕೊಂಡೋತ್ಸವ ನೋಡುತ್ತಿದ್ದಾಗ ಚಾವಣಿ ಕುಸಿದು ಮಹಿಳೆಯೊಬ್ಬರು ಮೃತಪಟ್ಟು, 25 ಮಂದಿ ಗಾಯಗೊಂಡ ಘಟನೆ ಮದ್ದೂರು ತಾಲ್ಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಮಂಗಳವಾರ ನಸುಕಿನಲ್ಲಿ ನಡೆದಿದೆ.

ಹುಲಿಗೆರೆಪುರ ಗ್ರಾಮದ ಪುಟ್ಟಚೆನ್ನಮ್ಮ(50) ಮೃತಪಟ್ಟಿದ್ದಾರೆ.

8 ಮಕ್ಕಳು ಸೇರಿ ಮಹಿಳೆಯರು, ವೃದ್ಧರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರಾಮದಲ್ಲಿ ಸೋಮವಾರ ಬಂಡಿ ಉತ್ಸವ ಇತ್ತು. ಮಂಗಳವಾರ ನಸುಕಿನಲ್ಲಿ ಗ್ರಾಮದೇವತೆಯ ಕೊಂಡೋತ್ಸವ ಆರಂಭವಾಗಿತ್ತು.

ಕೊಂಡೋತ್ಸವ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮದಿಂದ ಸಾವಿರಾರು ಜನರು ಬಂದಿದ್ದರು. ಗ್ರಾಮದ ಸಿದ್ದೇಗೌಡ ಎಂಬುವರಿಗೆ ಸೇರಿದ ಮನೆಯ ಚಾವಣಿ ಮೇಲೆ ನಿಂತು ನೂರಾರು ಜನ ವೀಕ್ಷಣೆ ಮಾಡುತ್ತಿದ್ದರು.

ಮನೆಯ ಮೇಲೆ ಇನ್ನಷ್ಟು ಜನ ಬರುತ್ತಲೇ ಇದ್ದರು. ಭಾರ ಜಾಸ್ತಿಯಾದ ಕಾರಣ ಚಾವಣಿ ಕುಸಿದಿದೆ. ಆ ಸಂದರ್ಭದಲ್ಲಿ ಮನೆಯ ಒಳಗೆ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಮದ್ದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲು ನೆರವಾದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರಿ ಸೌಲಭ್ಯ ಎರಡು ಮಕ್ಕಳಿಗೆ ಸೀಮಿತಗೊಳಿಸಲು ಒತ್ತಾಯ

Tue Mar 29 , 2022
ಬೆಂಗಳೂರು: ಜನಸಂಖ್ಯೆ ಸ್ಪೋಟ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದ್ದಾರೆ.ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ಜನಸಂಖ್ಯೆ ಸ್ಪೋಟವಾಗುತ್ತಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸರ್ಕಾರ ಕಠಿಣ ಕ್ರಮ ಕೈಗೊಂಡು ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಏನೇ ನಿಯಮಗಳನ್ನು ಜಾರಿಗೆ ತಂದರೂ ಕೂಡ ಜನಸಂಖ್ಯೆ ನಿಯಂತ್ರಣವಾಗುತ್ತಿಲ್ಲ. ಉತ್ತರಪ್ರದೇಶ ಸರ್ಕಾರ ಎರಡು ಮಕ್ಕಳಿಗಿಂತ ಹೆಚ್ಚಿನ […]

Advertisement

Wordpress Social Share Plugin powered by Ultimatelysocial