ಕೇವಲ ಪ್ರಚಾರಕ್ಕಾಗಿ ಬಂದ್ ಮಾಡಿದರೆ ನಮ್ಮ ಬೆಂಬಲವಿಲ್ಲ: ನಟ ನಿಖಿಲ್ ಕುಮಾರಸ್ವಾಮಿ

ರಾಮನಗರ: ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ

ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಅಭಿನಯಿಸಿರುವ ರೈಡರ್ ಸಿನಿಮಾ ರಾಜ್ಯಾದ್ಯಂತ ಡಿಸೆಂಬರ್ 22ರಂದು ಬಿಡುಗಡೆಗೊಂಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಇಂದು ಈ ಸಿನಿಮಾದ ಪ್ರಮೋಷನ್‍ಗಾಗಿ ರಾಮನಗರದ ಶಾನ್ ಚಿತ್ರಮಂದಿರಕ್ಕೆ ನಿಖಿಲ್ ಭೇಟಿ ನೀಡಿದ್ದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 31 ನೇ ತಾರೀಖು ಕರ್ನಾಟಕ ಬಂದ್ ಕರೆ ನೀಡಿರುವುದರಿಂದ ನಮ್ಮ ಚಿತ್ರರಂಗಕ್ಕೆ ಬಹಳ ದೊಡ್ಡ ಹೊಡೆತ ಬೀಳಲಿದೆ. 31ನೇ ದಿನಾಂಕ ಹಲವು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿದ್ದು, ಆ ಸಿನಿಮಾಗಳಿಗೆ ಹೊಡೆತ ಬೀಳಲಿದೆ. ನಮಗೆ ಮೊದಲ 3 ದಿನದ ಕಲೆಕ್ಷನ್ ಬಹಳ ಮುಖ್ಯ. ಆದರೆ ಆ ದಿನವೇ ಬಂದ್ ಮಾಡಿದರೆ ತೊಂದರೆಯಾಗುತ್ತದೆ. ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರೆ ಬಂದ್ ಮಾಡಲಿ. ಆದರೆ ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಬಾರದು. ಆ ರೀತಿಯ ಬಂದ್‍ಗೆ ಯಾವುದೇ ಕಾರಣಕ್ಕೂ ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಆಫ್ರಿಕಾ vs ಭಾರತ, 1 ನೇ ಟೆಸ್ಟ್, ದಿನ 1: ಅಜಿಂಕ್ಯ ರಹಾನೆ ಸೇರ್ಪಡೆ ಮತ್ತು ಹನುಮ ವಿಹಾರಿ, ಶ್ರೇಯಸ್ ಅಯ್ಯರ್ ಮಿಸ್ಸಿಂಗ್ !

Sun Dec 26 , 2021
ದಕ್ಷಿಣ ಆಫ್ರಿಕಾ ವಿರುದ್ಧದ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಹನುಮ ವಿಹಾರಿ ಮತ್ತು ಶ್ರೇಯಸ್ ಅಯ್ಯರ್ ಹೊರತುಪಡಿಸಿ ಅಜಿಂಕ್ಯ ರಹಾನೆ ಅವರನ್ನು ಒಳಗೊಂಡಂತೆ ಭಾರತವು ತಮ್ಮ ಪ್ಲೇಯಿಂಗ್ XI ಅನ್ನು ಬಹಿರಂಗಪಡಿಸಿತು.     ಈ ಸುದ್ದಿಗೆ ಟ್ವಿಟ್ಟರ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ, ಏಕೆಂದರೆ ಕೆಲವು ಅಭಿಮಾನಿಗಳು ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಅನುಭವವನ್ನು ಬ್ಯಾಂಕ್ ಮಾಡಬೇಕಾಗುತ್ತದೆ ಎಂದು ಭಾವಿಸಿದರೆ, ಇತರರು ವಿಹಾರಿ ಆಯ್ಕೆಗೆ “ಅರ್ಹರು” ಎಂದು […]

Advertisement

Wordpress Social Share Plugin powered by Ultimatelysocial