ಕೋಟಿಗೊಬ್ಬ-3 ಚಿತ್ರ ರಿಲೀಸ್ ಆಗದ ಹಿನ್ನಲೆ : ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಹೇಳಿದ್ದೇನು.?

ಇಂದು ಬಿಡುಗಡೆಯಾಗಲು ನಿರ್ಧರಿಸಿದ್ದಂತ ಕೋಟಿಗೊಬ್ಬ-3 ಚಿತ್ರ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಚಿತ್ರಮಂದಿರಗಳ ಬಳಿಯಲ್ಲಿ ಅನೇಕ ಅಭಿಮಾನಿಗಳು ದಾಂದಲೆ ನಡೆಸಿದ್ದರು. ಇದರಿಂದಾಗಿ ತಮ್ಮ ಅಭಿಮಾನಿಗಳಿಗೆ ನಟ ಕಿಚ್ಚ ಸುದೀಪ್ ಕ್ಷಮೆಯನ್ನು ಕೋರಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ವೀಡಿಯೋ ಬಿಡುಗಡೆ ಮಾಡಿರುವಂತ ನಟ ಕಿಚ್ಚ ಸುದೀಪ್ ಅವರು, ಬಾಬುವರು ಅಪ್ ಲೋಡ್ ಮಾಡಿದಂತ ವೀಡಿಯೋ ನೋಡಿದೆ. ಬಾಬು ನೀವು ಯಾರಿಂದ ತೊಂದ್ರೆಗೆ ಸಿಲುಕಿಕೊಂಡ್ರಿ ಅಂತ ಎಲ್ಲರಿಗೂ ಗೊತ್ತಿದೆ. ಅದಕ್ಕೆ ಕಾಲ ಉತ್ತರ ಕೊಡಲಿದೆ. ನಿಮ್ಮೊಂದಿಗೆ ನಾವಿದ್ದೇವೆ. ನಾಳೆಯಿಂದ ಭರ್ಜರಿ ಪ್ರದರ್ಶನ ಕಾಣಲಿದೆ. ಯಾವುದೇ ಅಭಿಮಾನಿಗಳು ಆವೇಶಕ್ಕೆ ಒಳಗಾಗಬಾರದು. ಚಿತ್ರಮಂದಿರಗಳನ್ನು ಹಾನಿ ಮಾಡಬಾರದು. ಚಿತ್ರಮಂದಿರಗಳ ಮಾಲೀಕರದ್ದು ಯಾವುದೇ ತಪ್ಪಿಲ್ಲ. ಇವತ್ತು ಒಂದಿನ ಆಗಿರುವಂತ ಸಮಸ್ಯೆಗೆ ಕ್ಷಮೆ ಇರಲಿ ಎಂದಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ : ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ ಪಿಎಂ ಮೋದಿ

Thu Oct 14 , 2021
 ಜ್ವರದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜೀ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ. ದೇವರು ಅವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ. ಎಂದು ಪಿಎಂ ಮೋದಿ ಹಾರೈಸಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial