ಸಿಮ್ ಕಾರ್ಡ್ ಹಾಳು ಮಾಡಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ!

ಮೊಬೈಲ್ ಸಿಮ್ ಕಾರ್ಡ್ ಹಾಳು ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳ ಮಂದರ್ಗಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಭರತ ಸುಭಾಷ್ ಚಂದ್ರವಾಡಿ ಎಂಬವನನ್ನು ಕೊಲೆ ಮಾಡಲಾಗಿದೆ.

ಈತ ತನ್ನ ಸಂಬಂಧಿ ಮಲ್ಲಿಕಾರ್ಜುನನ ಮೊಬೈಲ್ ನಲ್ಲಿದ್ದ ಸಿಮ್ ಕಾರ್ಡ್ ತೆಗೆದು ಇದ್ದಕ್ಕಿದ್ದಂತೆ ನೆಲಕ್ಕೆ ತಿಕ್ಕಿ ಹಾಳು ಮಾಡಿದ್ದ ಎನ್ನಲಾಗಿದೆ. ಅದಾಗಲೇ ಕುಡಿದ ಮತ್ತಿನಲ್ಲಿದ್ದ ಮಲ್ಲಿಕಾರ್ಜುನ ಆಕ್ರೋಶದಲ್ಲಿ ಭರತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ಬಸ್‌ ಸ್ಟೇರಿಂಗ್‌ ರಾಡ್‌ ಕಟ್‌; ಕೊಪ್ಪಳದಲ್ಲಿ ಲಾರಿ ಹರಿದು ಬೈಕ್ ಸವಾರ ಸಾವು!

Wed Mar 1 , 2023
ಹುಬ್ಬಳ್ಳಿ/ಕೊಪ್ಪಳ: ವಾಯವ್ಯ ಬಸ್‌ ಸ್ಟೇರಿಂಗ್ ರಾಡ್ ಕಟ್ಟಾಗಿ ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ನಡೆದಿದೆ. ಬಸ್‌ ಅಪಘಾತದಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ವಾಯವ್ಯ ಬಸ್‌ ಬಸ್‌ವೊಳಗೆ ಸಿಲುಕಿ ನರಳಾಡುತ್ತಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗದಗನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್‌ ಇದಾಗಿದೆ. ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್ ಸವಾರನ ಮೇಲೆ ಹರಿದ ಲಾರಿ […]

Advertisement

Wordpress Social Share Plugin powered by Ultimatelysocial