ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​

Rajinikanth: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​
ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು.‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ.

ಕರ್ನಾಟಕದ ಮೂಲದ ಅವರು ತಮಿಳುನಾಡಿಗೆ ತೆರಳಿ ಅಲ್ಲಿ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದರು. ವಯಸ್ಸು 70 ದಾಟಿದರೂ ಹದಿಹರೆಯದವರ ಎನರ್ಜಿಯಲ್ಲಿ ಸಿನಿಮಾ ಮಾಡುತ್ತಾರೆ. ಪ್ರತಿ ವರ್ಷ ಅವರ ಜನ್ಮದಿನದಂದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರುತ್ತಾರೆ. ರಜನಿಕಾಂತ್​ಗೂ ಅಷ್ಟೇ, ಅಭಿಮಾನಿಗಳನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಅವರ ಬಗ್ಗೆ ಹೆಚ್ಚು ಕಾಳಜಿ ತೋರುತ್ತಾರೆ. ಈಗ ಬೆಂಗಳೂರಿನ ಬಾಲಕಿ ಒಬ್ಬಳ ಆಸೆಯನ್ನು ಸೂಪರ್​ ಸ್ಟಾರ್​ ಈಡೇರಿಸಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬಾಲಕಿಯ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಕೊನೆಯ ದಿನಗಳಲ್ಲಿ ರಜನಿ ಬಾಲಕಿಯ ಆಸೆ ಈಡೇರಿಸಿದ್ದಾರೆ.

ರಜನಿಕಾಂತ್​ ಬೆಂಗಳೂರಿಗೆ ಬಂದು ಸೌಮ್ಯ ಅವಳನ್ನು ಭೇಟಿ ಮಾಡುವವರಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಹೀಗಾಗಿ, ‘ಧೈರ್ಯವಾಗಿರಿ. ಆರೋಗ್ಯ ಸರಿಹೋಗಲು ಪ್ರಾರ್ಥಿಸುತ್ತೇವೆ’ ಎಂದು ರಜನಿಕಾಂತ್​ ವಿಡಿಯೋ ಕಾಲ್​ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ರಜನಿಕಾಂತ್​ ಅವರಿಗೆ ಕರೆ ಮಾಡಿದ್ದ ಸೌಮ್ಯಾ ತಂದೆ ಮಗಳ ಆಸೆ ಬಗ್ಗೆ ವಿವರಿಸಿದ್ದರು. ನಂತರ ರಜನಿ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಷ್ಟೇ ಅಲ್ಲ, ಅವರ ಸಹೋದರ‌ ಸತ್ಯನಾರಾಯಣ್ ಅವರು ಸೌಮ್ಯಾ ಮನೆಗೆ ಭೇಟಿ ನೀಡಿ ರಜನಿ ‌ಪರವಾಗಿ ಧೈರ್ಯ ತುಂಬೋ ಕೆಲಸ‌ಮಾಡಿ ಬಂದಿದ್ದಾರೆ.

ರಕನಿ ಸಿನಿಮಾ ‘ಅಣ್ಣಾಥೆ’ ಇತ್ತೀಚೆಗೆ ತೆರೆಗೆಬಂದಿತ್ತು. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ಮೂರು ವಾರಗಳಲ್ಲಿ ಈ ಚಿತ್ರ ಬರೊಬ್ಬರಿ 239 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರ ಇತ್ತೀಚೆಗೆ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಇಡಿ ಮುಂದೆ ಹಾಜರಾದ ಐಶ್ವರ್ಯಾ ರೈ

Thu Dec 23 , 2021
ನವದೆಹಲಿ: 2016ರ ‘ಪನಾಮಾ ಪೇಪರ್ಸ್’ ಜಾಗತಿಕ ತೆರಿಗೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ನಟಿ ಐಶ್ವರ್ಯಾ ರೈ ಬಚ್ಚನ್ ಸೋಮವಾರ ಇಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಎದುರು ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ತನಿಖಾ ಸಂಸ್ಥೆಯು ವಿದೇಶದಲ್ಲಿ ಸಂಪತ್ತನ್ನು ಸಂಗ್ರಹಿಸಿರುವ ಆರೋಪದ ಮೇಲೆ ದೆಹಲಿಯಲ್ಲಿ 48 ವರ್ಷದ ನಟನ ಹೇಳಿಕೆಯನ್ನು ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರ ಸೊಸೆ ಐಶ್ವರ್ಯಾ ರೈ […]

Advertisement

Wordpress Social Share Plugin powered by Ultimatelysocial