ರಾಜಧಾನಿ ಬೆಂಗಳೂರಿನಲ್ಲಿಯೂ ಆರಂಭವಾಯ್ತು ನಕಲಿ ತುಪ್ಪದ ಹಾವಳಿ; KMF ಅಧಿಕಾರಿಗಳಿಂದ ದಾಳಿ |speed news kannada |

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ಬಳಿಕ ರಾಜಧಾನಿ ಬೆಂಗಳೂರಿನಲ್ಲಿಯೂ ನಂದಿನಿ ನಕಲಿ ತುಪ್ಪದ ಜಾಲ ಪತ್ತೆಯಾಗಿದ್ದು, ಕೆಎಂಎಫ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಿ ಕೆಎಂಎಫ್ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿದ್ದಾರೆ.ಹನುಮಂತನಗರ, ಜಯನಗರ, ರಾಜಾಜಿನಗರ, ನೆಲಮಂಗಲ, ಮಾಕಳಿ, ಹೊಸಕೋಟೆಯ ದೇವನಗೊಂದಿ ಹಾಗೂ ಇತರ ಭಾಗಗಳಲ್ಲಿ ಅಧಿಕಾರಿಗಳು ಅಂಗಡಿಗಳು ಹಾಗೂ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ದಾಳಿ ವೇಳೆ ನಂದಿನಿ ತುಪ್ಪದ 1000 ಮಿಲಿ ಸ್ಯಾಚೆ, 15 ಕೆಜಿ ಟಿನ್ ಮಾದರಿಯ ನಕಲಿ ತುಪ್ಪ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

Health Tips: ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗೆಲ್ಲ ಮಾತ್ರೆ ನುಂಗುತ್ತೀರಾ ಎಚ್ಚರ!

Fri Jan 28 , 2022
ಭಾರತದಲ್ಲಿ ಕೊರೊನಾ 3ನೇ ಅಲೆಯ ಸಾಂಕ್ರಾಮಿಕ ಶುರುವಾಗಿದೆ. ಜ್ವರವನ್ನು ಹೋಲುವ COVID-19 ರೋಗಲಕ್ಷಣಗಳನ್ನು ಗುಣಪಡಿಸಲು ಜನರು ಡೋಲೋ-650, ಪ್ಯಾರಾಸಿಟಮಾಲ್ ಮುಂತಾದ ಮಾತ್ರೆಗಳನ್ನು ಸೇವಿಸುತ್ತಾರೆ. ಎಷ್ಟೋ ಜನರು ಕೊರೊನಾ ರೋಗಲಕ್ಷಣಗಳು ಕಾಣಿಸಿಕೊಂಡರೂ ವೈದ್ಯರ ಬಳಿ ಹೋಗುವುದೇ ಇಲ್ಲ. ಬದಲಾಗಿ ತಾವೇ ಜ್ವರದ ಮಾತ್ರೆ, ನೋವು ನಿವಾರಕಗಳನ್ನು ಸೇವಿಸಿ ಸುಮ್ಮನಾಗುತ್ತಾರೆ. ಇದರಿಂದ ಔಷಧೀಯ ಉದ್ಯಮವು ಹೆಚ್ಚಿನ ಬೆಳವಣಿಗೆಯನ್ನು ಕಂಡಿದೆ. ಡೋಲೋ – ಪ್ಯಾರಸಿಟಮಾಲ್ ಮಾತ್ರೆಗಳ ಸೇವನೆ ಎಷ್ಟಾಗಿದೆ ಎಂಬುದರ ಕುರಿತು ಇತ್ತೀಚಿನ ಅಂಕಿ-ಅಂಶಗಳ […]

Advertisement

Wordpress Social Share Plugin powered by Ultimatelysocial