ಕೊಡಗಿನಲ್ಲಿ ಯುವತಿಯನ್ನು ಕತ್ತಿಯಿಂದ ಕಡಿದು ಭೀಕರ ಹತ್ಯೆ.

ತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ನಂಗಾಲ ಗ್ರಾಮದಲ್ಲಿ ನಡೆದಿದೆ.

ನಂಗಾಲ ಗ್ರಾಮದ ನಿವಾಸಿ ಆರತಿ (24) ಎಂದು ಹತ್ಯೆಗೊಳಗಾದ ಯುವತಿ. ತಮ್ಮಯ್ಯ ಎಂಬಾತ ಆಕೆಯನ್ನು ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಆರತಿ ಕೊಲೆಯಾದ ಸ್ಥಳದಲ್ಲಿ ತಮ್ಮಯ್ಯನ ಹೆಲ್ಮೆಟ್ ಪತ್ತೆಯಾಗಿದ್ದು, ಕೊಲೆಯಾದ ಸ್ವಲ್ಪ ದೂರದಲ್ಲಿ ಆತನ ಬೈಕ್ ಕೂಡ ಪತ್ತೆಯಾಗಿದೆ.

ಮೂರು ದಿನಗಳಿಂದ ಆರತಿಗೆ ತಮ್ಮಯ್ಯ ಟಾರ್ಚರ್ ನೀಡುತ್ತಿದ್ದು, ಭಾನುವಾರ ರಾತ್ರಿ ಆತನೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ತಮ್ಮಯ್ಯನ ಮೊಬೈಲ್ ಹಾಗೂ ಚಪ್ಪಲಿ ಸ್ಥಳದಲ್ಲಿ ಪತ್ತೆಯಾಗಿದೆ. ಹತ್ಯೆ ಬಳಿಕ ತಮ್ಮಯ್ಯ ಕೂಡ ವಿಷ ಸೇವಿಸಿರುವ ಬಗ್ಗೆ ಅನುಮಾನ ಹುಟ್ಟಿದೆ. ಇದಕ್ಕೆ ಕಾರಣ ಮೊಬೈಲ್ ದೊರೆತಿರುವ ಸ್ಥಳದಲ್ಲಿ ವಿಷದ ಬಾಟಲಿ ಕೂಡ ಸಿಕ್ಕಿರುವುದು. ಆರೋಪಿಯ ಪತ್ತೆಗಾಗಿ ವಿರಾಜಪೇಟೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಕ್ಷವನ್ನು ಬೆಂಬಲಿಸಿ ಅಧಿಕೃತವಾಗಿ ಕಡಬೂರು ಮಂಜುನಾಥ್ ಅಧ್ಯಕ್ಷತೆಯಲ್ಲಿ ಸೇರ್ಪಡೆಯಾದರು.

Mon Jan 16 , 2023
ಕೂತನೂರು ಗ್ರಾಮ ದಲ್ಲಿ 100 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷವನ್ನು ತೊರೆದು ಜಾತ್ಯತೀತ ಜನತಾದಳ ಪಕ್ಷವನ್ನು ಬೆಂಬಲಿಸಿ ಅಧಿಕೃತವಾಗಿ ಕಡಬೂರು ಮಂಜುನಾಥ್ ಅಧ್ಯಕ್ಷತೆಯಲ್ಲಿ ಸೇರ್ಪಡೆಯಾದರು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial