ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಬಿಸಿಸಿಐ ಆಯ್ಕೆ

 

ನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಗುರುವಾರ ಪ್ರಕಟಿಸಿದ್ದು, ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ,ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

ಜುಲೈ 29 ರಂದು ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ T20 ಸರಣಿ ಆರಂಭವಾಗಲಿದೆ.

ತೊಡೆಸಂದು ಗಾಯದಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕಳೆದುಕೊಂಡಿದ್ದ, ಕೊಹ್ಲಿ ಎರಡನೇ ಪಂದ್ಯಕ್ಕೂ ಅನಿಶ್ಚಿತರಾಗಿದ್ದಾರೆ.ಇನ್ನೊಂದೆಡೆ ಕಳಪೆ ಫಾರ್ಮ್ ಕೂಡ ಅವರನ್ನು ಕಾಡುತ್ತಿದೆ.

ತಂಡ ಇಂತಿದೆ

ರೋಹಿತ್ ಶರ್ಮಾ (ನಾಯಕ), ಐ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ಡಿ ಹೂಡಾ, ಎಸ್ ಅಯ್ಯರ್, ಡಿ ಕಾರ್ತಿಕ್, ಆರ್ ಪಂತ್, ಎಚ್ ಪಾಂಡ್ಯ, ಆರ್ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಆರ್.ಬಿಷ್ಣೋಯ್, ಕುಲದೀಪ್ ಯಾದವ್*, ಬಿ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

*ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆ ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ‘ಭೂಚೇತನ’ ಯೋಜನೆ

Thu Jul 14 , 2022
ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ‘ಭೂಚೇತನ’ ಯೋಜನೆ ಪುನಾರಂಭಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ‘ಇಳುವರಿ ಮತ್ತು ರೈತರ ಆದಾಯ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭೂಚೇತನ ಯೋಜನೆ ಪುನಾರಂಭಿಸಲು ಉದ್ದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿ ಹಮ್ಮಿಕೊಂಡ ಎರಡು ದಿನಗಳ ಎಲ್ಲಾ ರಾಜ್ಯಗಳ ಕೃಷಿ ಮತ್ತು ತೋಟಗಾರಿಕೆ ಸಚಿವರುಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿಯಲ್ಲಿ ಆರಂಭಗೊಂಡಿದ್ದ ಯೋಜನೆ […]

Advertisement

Wordpress Social Share Plugin powered by Ultimatelysocial