ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ‌ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲು

ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ‌ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.ತಹಸೀಲ್ದಾರ್​ ಸೇರಿದಂತೆ‌ ನಾಲ್ವರು ಅಧಿಕಾರಗಳ ಎಫ್​ಐಆರ್ ದಾಖಲಿಸಲಾಗಿದೆ.ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು.ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು.ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ ತಹಸೀಲ್ದಾರ್​ ಜಿ. ರಾಜಶೇಖರ್, ಗ್ರಾಮ ಲೆಕ್ಕಿಗ ಅರವಿಂದ, ಕಂದಾಯ ನಿರೀಕ್ಷಿಕ ಸಾದತ್ ವುಲ್ಲಾ ಖಾನ್, ನಾಡಕಚೇರಿ ಶಿರೇಸ್ತೆದಾರ್ ಜಯರಾಂ ಕೃತ್ಯ ಎಂಬುದು ಬಹಿರಂಗವಾಗಿದ್ದು, ಅಧಿಕಾರಿಗಳ ವಿರುದ್ಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದು ಅಧಿಕಾರಿಗಳು ಮಾಡಿದ ಎಡವಟ್ ಅಥವಾ ಉದ್ದೇಶಪೂರ್ವಕವಾಗಿಯೇ ಮಾಡಿದ ಕೃತ್ಯವಾ ಎಂದು ತನಿಖೆಯಿಂದ ತಿಳಿದುಬರಬೇಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊಪ್ಪಳದಲ್ಲಿ: ವಿಮಾನ ನಿಲ್ದಾಣ ನಿರ್ಮಾಣ; ಪರಿಶೀಲಿಸಿದ ಅಧಿಕಾರಿಗಳು

Sun Jan 30 , 2022
ಕೊಪ್ಪಳ, ಜನವರಿ 30; ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಬೇಕು ಎಂಬ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರುವ ನಿರೀಕ್ಷೆ ಇದೆ. ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಸ್ಥಳ ವೀಕ್ಷಣೆ ಮಾಡಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಾಗಿದ  ರಾಜ್ಯ ಸಣ್ಣ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಎಂ. ಆರ್.ರವಿ ನೇತೃತ್ವದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸ್ಥಳ ಪರಿಶೀಲನೆಗೆ ಸಚಿವ […]

Advertisement

Wordpress Social Share Plugin powered by Ultimatelysocial