ಕೋಲಾರ: ಬೈಕ್​ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಉಚಿತ ಪೆಟ್ರೋಲ್​!

 

ಕೋಲಾರ: ಬೈಕ್​ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಉಚಿತ ಪೆಟ್ರೋಲ್​ ಎಂದಿದ್ದೇ ತಡ ಬೈಕ್​ ಸವಾರರು ಪೆಟ್ರೋಲ್​ ಬಂಕ್​ನಲ್ಲಿಯೇ ಮುಗಿಬಿದ್ದ ಪ್ರಸಂಗ ಕೋಲಾರದ ಮಾಲೂರಿನಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್​ ಉಚಿತ ಎಂದು ಹೇಳಲಾಗಿತ್ತು.

ಇದನ್ನೇ ಸದಾವಕಾಶ ಮಾಡಿಕೊಂಡ ಬೈಕ್​ ಸವಾರರು ಪೆಟ್ರೋಲ್​ಗಾಗಿ ಮುಗಿಬಿದ್ದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇದಕ್ಕಾಗಿ ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ಬೈಕ್​ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಉಚಿತ ಪೆಟ್ರೋಲ್​ ವ್ಯವಸ್ಥೆಯನ್ನು ಮಾಡಿದ್ದರು.

ಜೆಡಿಎಸ್ ಟೀ ಶರ್ಟ್ ಹಾಕಿ ಬೈಕ್ ರ್ಯಾಲಿಗೆ ಬಂದವರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು,ಬೈಕ್ ಮೇಲೆ RG ಎಂದು ಮಾರ್ಕ್ ಹಾಕಿ ಕಳುಹಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಹಿಳೆಯರಿಗೆ ಟೋಕನ್ ವಿತರಣೆ, ಕಾರ್ಯಕ್ರಮ ಮುಗಿದ ಬಳಿಕ ಅಕ್ಕಿ ಮೂಟೆ ನೀಡುವುದಾಗಿ ಭರವಸೆ ನೀಡಲಾಗಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

5ರಿಂದ 12 ವಯೋಮಿತಿಯ ಮಕ್ಕಳಿಗೆ ಬಯಾಲಾಜಿಕಲ್ ಇ ಕಂಪನಿಯ ಕೊರ್ಬೆವ್ಯಾಕ್ಸ್ ಲಸಿಕೆ!

Fri Apr 22 , 2022
ನವದೆಹಲಿ: ದೇಶದಲ್ಲಿ ಕರೊನಾ ಸೋಂಕು ಮತ್ತೆ ಏರಿಕೆಯಾಗುತ್ತಿರುವುದರ ನಡುವೆ, 5ರಿಂದ 12 ವಯೋಮಿತಿಯ ಮಕ್ಕಳಿಗೆ ಬಯಾಲಾಜಿಕಲ್ ಇ ಕಂಪನಿಯ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲು ತಜ್ಞರ ಸಮಿತಿ ಗುರುವಾರ ಶಿಫಾರಸು ಮಾಡಿದೆ. ಭಾರತೀಯ ಔಷಧಗಳ ಮಹಾ ನಿಯಂತ್ರಣ (ಡಿಸಿಜಿಐ) ಸಂಸ್ಥೆಯ ವಿಷಯ ತಜ್ಞರ ಸಮಿತಿ (ಎಸ್​ಇಸಿ) ಮಕ್ಕಳ ಲಸಿಕೆ ಕುರಿತು ಗುರುವಾರ ಸಭೆ ನಡೆಸಿದ್ದು ಕೊರ್ಬೆವ್ಯಾಕ್ಸ್ ವ್ಯಾಕ್ಸಿನ್ ಶಿಫಾರಸು ಮಾಡಲು ನಿರ್ಧರಿಸಿತು. ಅದು ಡಿಸಿಜಿಐಗೆ ಈ ಶಿಫಾರಸನ್ನು ಕಳಿಸಿದೆ. ಇದೀಗ ಕೇಂದ್ರ ಸರ್ಕಾರ, […]

Advertisement

Wordpress Social Share Plugin powered by Ultimatelysocial