ಕೊಪ್ಪಳ, ಜನವರಿ 30; ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಬೇಕು ಎಂಬ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರುವ ನಿರೀಕ್ಷೆ ಇದೆ. ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಸ್ಥಳ ವೀಕ್ಷಣೆ ಮಾಡಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಾಗಿದ ರಾಜ್ಯ ಸಣ್ಣ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಎಂ. ಆರ್.ರವಿ ನೇತೃತ್ವದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸ್ಥಳ ಪರಿಶೀಲನೆಗೆ ಸಚಿವ ವಿ. ಸೋಮಣ್ಣ ಸೂಚನೆ ನೀಡಿದ್ದರು.
ಕೊಪ್ಪಳ ವಿಮಾನ ನಿಲ್ದಾಣ; ಸ್ಥಳ ಪರಿಶೀಲಿಸಿ ವರದಿ ತಯಾರಿಕೆಗೆ ಸೂಚನೆ
ಸಭೆಯಲ್ಲಿ ಮಾತನಾಡಿದ ಎಂ. ಆರ್. ರವಿ, “ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಕಾರ್ಯ ಸಾಧ್ಯತೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ” ಎಂದು ಹೇಳಿದರು. ಈ ವರದಿ ಸಲ್ಲಿಕೆಯಾದ ಬಳಿಕ ಸರ್ಕಾರ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ದಾವಣಗೆರೆ ಏರ್ಪೋರ್ಟ್ ಬೇಡಿಕೆಗೆ ಮನ್ನಣೆ, ಅಧಿಕಾರಿಗಳ ಭೇಟಿ
ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಹೊಸದಾಗಿ ವಿಮಾನ ನಿಲ್ದಾಣ ಸ್ಥಾಪಿಸುವ ಕುರಿತು ಬೆಂಗಳೂರಿನಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದರು. ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ವರದಿ ನೀಡುವಂತೆ ಸೂಚನೆ ನೀಡಿದ್ದರು.