ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ : CRIME

Karnataka Crime News: ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ, ಚಿಕ್ಕಮಗಳೂರಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಭಾಮೈದನಾಗಿರುವ ಉದ್ಯಮಿ ಸುದರ್ಶನ್​ಗೆ ಸೇರಿದ ಟಿಪ್ಪರ್​ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸಾವನ್ನಪ್ಪಿದ್ದಾನೆ.ಕೊಪ್ಪಳ: ಕೊಪ್ಪಳದ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ 52 ವರ್ಷದ ಶ್ರೀಧರ್ ಅಂಗಡಿ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಪ್ಪಳ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಇವರು ಕೊಪ್ಪಳ ನಗರದ ಬಸವನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಶ್ರೀಧರ್ ಅಂಗಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಆತ್ಮಹತ್ಯೆ ಕುರಿತು ಮಾತನಾಡಲು ಮನೆಯವರ ಹಿಂದೇಟು ಹಾಕಿದ್ದಾರೆ. ಆತ್ಮಹತ್ಯೆ ಕುರಿತು ಇನ್ನೂ ದೂರು ದಾಖಲಾಗಿಲ್ಲ.

Please follow and like us:

Leave a Reply

Your email address will not be published. Required fields are marked *

Next Post

ಹೆಲಿಕಾಪ್ಟರ್ ದುರಂತ ಇಂದು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ರ ಅಂತ್ಯಕ್ರಿಯೆ

Fri Dec 17 , 2021
ತಮಿಳುನಾಡು ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಭೋಪಾಲ್‌ನಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆ ಸುಮಾರಿಗೆ ಧಾರ್ಮಿಕ ವಿಧಿ ವಿಧಾನ ನಡೆಯಲಿದೆ.ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ರಾಜ್ಯ ಮತ್ತು ಮಿಲಿಟರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಗುರುವಾರ ಮುಂಜಾನೆ, ಸಿಂಗ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿAದ ಭೋಪಾಲ್ ವಿಮಾನ […]

Advertisement

Wordpress Social Share Plugin powered by Ultimatelysocial