ಬೆಂಗಳೂರು : ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ವಜಾ ಆಗಿದ್ದ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಸಾರಿಗೆ ನೌಕರರ ಮರು ನೇಮಕಕ್ಕೆ ಶ್ರೀರಾಮುಲು ಚಾಲನೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ಒಟ್ಟು 1,610 ಸಿಬ್ಬಂದಿ ಮುಷ್ಕರದಿಂದ ಕೆಲಸ ಕಳೆದುಕೊಂಡಿದ್ದರು.ಇದೀಗ ಮುಖ್ಯಮಂತ್ರಿ ಸೂಚನೆ ಮೇರೆಗೆ ಮರು ನೇಮಕಾತಿ ಆಗುತ್ತಿದೆ ಎಂದು ತಿಳಿಸಿದರು.ಕಾನೂನಲ್ಲಿ ಅವಕಾಶ ಇಲ್ಲದಿದ್ದರೂ ಮರುನೇಮಕ ಮಾಡಿಕೊಳ್ಳಲಾಗುತ್ತಿದೆ. ಇನ್ನುಳಿದ 1520 ಸಿಬ್ಬಂದಿ ಮರುನೇಮಕ ಹಂತ ಹಂತವಾಗಿ ಆಗಲಿದೆ. ಕೊರೋನಾ, ತೈಲದರಗಳ ಬೆಲೆ ಏರಿಕೆಯಿಂದಾಗಿ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾವೆ. ನೌಕರರಿಗೆ ಸಂಬಳ ಕೂಡ ನೀಡಲಾಗದಷ್ಟು ಸಮಸ್ಯೆ ಎದುರಿಸುವಂತೆ ಆಗಿದೆ. ಇದರ ನಡುವೆಯೂ ವೋಲ್ವೋ ಪ್ರಯಾಣದರ ಇಳಿಕೆ ಮಾಡಲಾಗಿದೆ. ಕೆ ಎಸ್ ಆರ್ ಟಿ ಸಿ ಪ್ರಯಾಣದರ ಏರಿಕೆ ಮಾಡೋದಿಲ್ಲ ಅಂತ ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada