ಧರ್ಮ ಧರ್ಮದ ನಡುವೆ ಸಂಘರ್ಷವನ್ನು ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬೆಲೆ ಏರಿಕೆ ಗಗನಕ್ಕೆ ಹೋಗುತ್ತಿದೆ.
60 ಸಾವಿರ ಸ್ಟೀಲ್ ಬೆಲೆ ಇತ್ತು. ಇಂದು 1 ಲಕ್ಷ ತಲುಪಿದೆ. ವಿದ್ಯುತ್ ಶಕ್ತಿ ಯೂನಿಟ್ ಬೆಲೆ ಹೆಚ್ಚು ಮಾಟಿದ್ದಾರೆ. ಹಾಲಿನ ದರ ಹೆಚ್ಚು ಮಾಡಲು ತೀರ್ಮಾನ ಮಾಡಿದ್ದಾರಂತೆ. ಈ ವಿಷಯಗಳಿಂದ ನಾಡಿನ ಜನರ ದೃಷ್ಟಿ ಬೇರೆ ಕಡೆ ಡೈವರ್ಟ್ ಮಾಡಿ ಬಿಜೆಪಿ ಧರ್ಮ ಧರ್ಮದ ನಡುವೆ ಸಂಘರ್ಷವನ್ನು ಮಾಡುತ್ತಿದೆ ಎಂದು ಕಿಡಿಕಾರಿದೆ.
ರಾಜ್ಯ ಸರ್ಕಾರ ಜಾಣ ಮೌನಕ್ಕೆ ಹೋದರೂ. ಅಲ್ ಖೈದಾಗೆ ವಿಚಾರದಲ್ಲಿ ತನಿಖೆ ಮಾಡಲು ಹೇಳಿದ್ದಾರೆ. ಅವತ್ತಿನ ಮನಮೋಹನ್ ಸಿಂಗ್ ಅವರನ್ನು ಮೌನಿ ಎಂದಿದ್ರು. ಇವತ್ತು ಮೋದಿ, ಬೊಮ್ಮಯಿ ಮೌನಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada