ನೀವು ತಲೆ ಒಡೆಯುತ್ತಿರಿ, ನಾವು ಕನಿಕರ ವ್ಯಕ್ತ ಪಡಿಸುತ್ತಲೇ ಇರುತ್ತೇವೆ

 

ರಾಮನಗರ: ಬಿಜೆಪಿ ಬಂದ ನಂತರ ಕೊಲೆಗಳು ಹೆಚ್ಚಾಗಿವೆ. ತಲೆ ಒಡೆಯುವ ವಾತಾವರಣ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಕೇತಗಾನಹಳ್ಳಿಯ ತೋಟದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ತಲೆ ಒಡೆಯುತ್ತಿರಿ, ನಾವು ಕನಿಕರ ವ್ಯಕ್ತ ಪಡಿಸುತ್ತಲೇ ಇರುತ್ತೇವೆ ಎಂದು ಆಕ್ರೋಶ ಹೊರಹಾಕಿದರು.

ಜಮೀರ್ ಅಹಮದ್, ಚಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತೆ ಜೆಡಿಎಸ್ ಪಕ್ಷಕ್ಕೆ ವಾಪಸ್ ಬಂದರೆ ಕರೆದುಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರ ಪಕ್ಷದ ಮುಂದೆ ಇಲ್ಲ. ಕೆಲವರನ್ನು ಪಕ್ಷಕ್ಕೆ ವಾಪಸ್ಸು ಕರೆದುಕೊಳ್ಳದಂತೆ ಪಕ್ಷದ ಕಾರ್ಯಕರ್ತರೇ ಒತ್ತಡ ಹೇರುತ್ತಿದ್ದಾರೆ ಎಂದರು.

ರಾಜ್ಯದ 15 ಪ್ರಮುಖ ನದಿಗಳಿಂದ ನೀರು ಸಂಗ್ರಹ ಕಾರ್ಯಕ್ರಮ ಜನತಾ ಜಲಧಾರೆಗೆ ನಾಳೆ ರಾಮನಗರದಲ್ಲಿ ಚಾಲನೆ ಸಿಗಲಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಧರ್ಮ ದಂಗಲ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದು,

Mon Apr 11 , 2022
ಬೆಂಗಳೂರು : ಧರ್ಮ ದಂಗಲ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದು, ಎಲ್ಲವನ್ನೂ ಇಲ್ಲಿಗೆ ಬಿಟ್ಟು, ನಿಮ್ಮ ಕೆಲಸ ನೀವು ಮಾಡಿ. ಇಲ್ಲವಾದ್ರೆ, ಸರ್ಕಾರದಿಂದ ಕಠಿಣ ಕ್ರಮ ಖಂಡಿತ ಎಂದಿದ್ದಾರೆ. ‘ನಾನು ಒಂದೇ ಮಾತಲ್ಲಿ ಹೇಳಬೇಕು ಅಂದ್ರೆ ಹಿಂದೂ ಮುಸ್ಲಿಂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಅನ್ನೋದು ಎಲ್ಲರ ಅಪೇಕ್ಷೆ. ಯಾರೋ ಕಿಡಿಗೇಡಿಗಳು ಇದನ್ನು ಅಡ್ಡಿ ಮಾಡುವಂತ ಪ್ರಯತ್ನ ಮಾಡಿದ್ರೆ, ಈಗಾಗಲೇ ಮುಖ್ಯಮಂತ್ರಿಗಳು ಹೇಳಿದಂತೆ ಅಂಥವರ ಮೇಲೆ ಕಾನೂನಿನ ಕ್ರಮ […]

Advertisement

Wordpress Social Share Plugin powered by Ultimatelysocial