ಉಕ್ರೇನ್ ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ:

ಬೆಂಗಳೂರು: ಉಕ್ರೇನ್ ನಿಂದ ವಾಪಸಾಗಿ ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ, ಜೀವ ಉಳಿಸಿಕೊಂಡು ರಾಜ್ಯಕ್ಕೆ ವಾಪಸ್ ಬಂದಿರುವ ಎಲ್ಲ ವಿದ್ಯಾರ್ಥಿಗಳಿಗೂ ರಾಜ್ಯ ಸರಕಾರ ಮಾನವೀಯ ದೃಷ್ಟಿಯಿಂದ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದು ಆಗ್ರಹಿಸಿದ್ದಾರೆ.‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಎಂದು ಒತ್ತಾಯಿಸಿದ್ದಾರೆ.2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯ. ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಷ್ಯಾ-ಉಕ್ರೇನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಇಂದು ಮಾತುಕತೆ!

Mon Mar 7 , 2022
  ನವದೆಹಲಿ/ಮಾಸ್ಕೊ/ಕೀವ್: ಫ್ರಾನ್ಸ್ ಅಧ್ಯಕ್ಷ ಎನ್ಮೌಲ್ ಮ್ಯಾಕ್ರೊನ್ ಅವರ ಮನವಿ ಮೇರೆಗೆ ಉಕ್ರೇನ್ ನಲ್ಲಿ ಭಾರತೀಯ ಕಾಲಮಾನ ಇಂದು ಸೋಮವಾರ ಮಧ್ಯಾಹ್ನ 12.30ಕ್ಕೆ ಕದನ ವಿರಾಮ ಘೋಷಿಸಿ ಮಾನವೀಯ ಕಾರಿಡಾರ್ ನಿರ್ಮಿಸಲು ರಷ್ಯಾ ನಿರ್ಧರಿಸಿದೆ.ಇಂದು ಮಧ್ಯಾಹ್ನ ಕದನ ವಿರಾಮ ಘೋಷಣೆ ಮಾಡುವುದಾಗಿ ರಷ್ಯಾ ತಿಳಿಸಿದೆ.ಉಕ್ರೇನ್ ನ ಹಲವು ಭಾಗಗಳಲ್ಲಿ ಮಾನವೀಯ ಕಾರಿಡಾರ್ ಗಳನ್ನು ತೆರೆಯುವುದಾಗಿ ರಷ್ಯಾ ಘೋಷಿಸಿದೆ.ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರ ಕೋರಿಕೆಯ ಮೇರೆಗೆ ಕೈವ್, ಮಾರಿಯುಪೋಲ್, ಖಾರ್ಕಿವ್ ಮತ್ತು […]

Advertisement

Wordpress Social Share Plugin powered by Ultimatelysocial