ದಾವಣಗೆರೆ : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ, ಆರೋಗ್ಯ, ರೈತರ ಅಭಿವೃದ್ಧಿ ಸೇರಿ ಪಂಚರತ್ನ ಯೋಜನೆ ಜಾರಿಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ಹರಿಹರ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಉಚಿತ ಶಿಕ್ಷಣ, ಆರೋಗ್ಯ, ರೈತರ ಉನ್ನತಿ, ಯುವಜನತೆಗೆ ಸ್ವ ಉದ್ಯೋಗ, ಪ್ರತಿ ಕುಟುಂಬಕ್ಕೂ ಸ್ವಂತ ಮನೆ ಸೌಕರ್ಯ ಒದಗಿಸುವ ಪಂಚರತ್ನ ಯೋಜನೆಯನ್ನು ಪಕ್ಷ ರೂಪಿಸಿದೆ ಎಂದು ಹೇಳಿದ್ದಾರೆ.
ಇನ್ನು ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಪಕ್ಷ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ 1 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲಾಗುವುದು. ಹರಿಹರದ ಬೈರನಪಾದ ಏತ ನೀರಾವರಿ ಯೋಜನೆ, ಕೆರೆ ಭರ್ತಿ, ಮೆಡಿಕಲ್, ಎಂಜಿನಿಯರ್ ಕಾಲೇಜು ಸ್ಥಾಪನೆ ಇತ್ಯಾದಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada