ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಎಚ್‍ಡಿಕೆ ಒತ್ತಾಯ!

ಬೆಂಗಳೂರು, ಮೇ 17- ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಹಾಗೂ ಶಿಕ್ಷಕರ ಸಮಸ್ಯೆ-ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಉದಾಸೀನ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿ ಶಾಲೆಗಳು ಸೋರುತ್ತಿವೆ. ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ ವ್ಯವಸ್ಥೆ ಕಲ್ಪಿಸಬೇಕು. ಇದು ರಾಜ್ಯ ಸರಕಾರದ ಹೊಣೆ ಎಂದು ಆಗ್ರಹಿಸಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕೂತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದುಕೊರತೆಗಳನ್ನು ನೀಗಿಸಬೇಕು. ಸ್ವಚ್ಛತೆ-ನೈರ್ಮಲ್ಯ, ಮೂಲಸೌಕರ್ಯಗಳನ್ನು ಉತ್ತಮಪಡಿಸಲು ಶ್ರಮಿಸಬೇಕು ಎಂಬ ಸಲಹೆ ಮಾಡಿದ್ದಾರೆ.

ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ-ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ ಎಂದಿದ್ದಾರೆ.

ಶಾಲೆಗೆ ಬಂದ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸಿದ ಸಮಸ್ತ ಶಿಕ್ಷಕರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮಕ್ಕಳ ಜತೆ ಮಕ್ಕಳಾಗಿ ಶಿಕ್ಷಕರು ವಹಿಸುವ ಜವಾವ್ದಾರಿ ಮಹತ್ವದ್ದು. ಕೋವಿಡ್ನಿಂದ ಬಳಲಿದ ಕಲಿಕಾ ವ್ಯವಸ್ಥೆಗೆ ನವಚೈತನ್ಯ ತುಂಬಿದವರೂ ಇವರೇ. ಅವರ ಸಮಸ್ಯೆ-ಬೇಡಿಕೆಗಳ ಬಗ್ಗೆ ರಾಜ್ಯ ಸರಕಾರ ಉದಾಸೀನ ಮಾಡಬಾರದು ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಯುಎಇ ಭೇಟಿ...

Tue May 17 , 2022
  ಅಬುಧಾಬಿ (ಯುಎಇ), ಮೇ 17 – ಅಮೆರಿಕ ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್ ಅವರು ಉನ್ನತ ನಿಯೋಗದೊಂದಿಗೆ ಯುಎಇ ಗೆ ಬಂದಿಳಿದಿದ್ದಾರೆ. ತೈಲ ಸಮೃದ್ಧ ಅಬುಧಾಬಿಗೆ ಅಮೆರಿಕದ ಅತ್ಯುನ್ನತ ಮಟ್ಟದ ಭೇಟಿ ಇದಾಗಿದ್ದು ,ಉಕ್ರೇನ್-ರಷ್ಯಾಯುದ್ಧದಿಂದ ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಸಂಬಂಧಗಳನ್ನು ಸರಿಪಡಿಸಲು ಪ್ರಯತ್ನದ ಸೂಚಕವಾಗಿದೆ ಎಂಬುವದು ಹೇಳಲಾಗಿದೆ. ಯುಎಇಯ ಪ್ರಬಲ ರಾಷ್ಟ್ರೀಯ ಭದ್ರತಾ ಸಲಹೆಗಾರ ಶೇಖ್ ತಹ್ನೂನ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಹ್ಯಾರಿಸ್ ಅವರನ್ನು ಸ್ವಾಗತಿಸಿದರು. ನಿಯೋಗದಲ್ಲಿ […]

Advertisement

Wordpress Social Share Plugin powered by Ultimatelysocial