ಕುಷ್ಟಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಿರೇಬನ್ನಿಗೋಳ ಗ್ರಾಮದ ರೈತ ಶರಣಪ್ಪ ತಳವಾರ ಮೇಕೆ ಶೆಡ್ ನಿರ್ಮಿಸಿ ಹತ್ತಾರು ಕುರಿ ಮರಿಗಳನ್ನು ಸಾಕುತ್ತಾ ಅವುಗಳನ್ನ ಮಾರಾಟ ಮಾಡಿ ಅಧಿಕ ಲಾಭ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.ಈ ಗ್ರಾಮದ ಬಹುತೇಕ ರೈತರು ಕೃಷಿ ಬದುಕಿನ ಜೊತೆಗೆ ಹಸು, ಎಮ್ಮೆ, ಎತ್ತು, ಮೇಕೆ ಕುರಿಗಳನ್ನು ಸಾಕುವುದು ಉಪಕಸುಬುವಾಗಿದೆ. ಆದರೆ ಜಾನುವಾರುಗಳನ್ನು ಸಾಕಲು ಸರಿಯಾದ ವ್ಯವಸ್ಥೆ ಸೂಕ್ತ ಆರೈಕೆ ಮಾಡದಿರುವುದರಿಂದ ಸಾವು ನೋವು ಸಹಜವಾಗಿತ್ತು. ಈ ಹಿನ್ನೆಲೆಯಲ್ಲಿ ಬಹುತೇಕ ಜನರು ದನಕರುಗಳನ್ನು, ಮೇಕೆ ಗಳನ್ನು ಸಾಕುವುದಕ್ಕೆ ಹಿಂದೇಟು ಹಾಕುತ್ತಿದ್ದರು. ಜಾನುವಾರುಗಳು, ಮೇಕೆ ಗಳು ಸಂಕಷ್ಟದಲ್ಲಿರುವ ಪರಿಸ್ಥಿತಿಯನ್ನು ಕಂಡು ಜನಪ್ರತಿನಿಧಿಗಳು ಗ್ರಾಮ ಪಂಚಾಯಿತಿಯೊಂದಿಗೆ ಕೈಜೋಡಿಸಿದಾಗ ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಮುಂದಾದರು.ಈ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಮೇಕೆ ಸಾಕಾಣಿಕೆಯಲ್ಲಿ ಲಾಭ ಕಂಡಿದ್ದಾರೆ.ನರೇಗಾ ಅನುದಾನ:68 ಸಾವಿರ ರೂ ಮೊತ್ತದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸುಸಜ್ಜಿತ ಮೇಕೆ ಶೆಡ್ ನಿರ್ಮಿಸಿಕೊಂಡಿದ್ದಾರೆ. ಕಾಮಗಾರಿ ಸಂಕೇತ ಸಂಖ್ಯೆ: 1520003015/ IF/93393042893147465 ಕೂಲಿ ಹಣ ರೂ.8092=00, ಸಾಮಗ್ರಿ ಹಣ ರೂ.57319=00 ಒಟ್ಟು ರೂ.65411=00 ಪಾವತಿಯಾಗಿದ್ದು 28 ಮಾನವ ದಿನಗಳನ್ನು ಸೃಜಿಸಲಾಗಿದೆ.
ಕುಷ್ಟಗಿ: ಮೇಕೆ ಸಾಕಾಣಿಕೆಗೆ ಸಿಕ್ತು ನರೇಗಾ ಬಲ!
Please follow and like us: