ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಮಹಾಪುರುಷರ ಇತಿಹಾಸ ತಿರುಚಿರುವುದು ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನಿಸಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಿದರು.ನಾಡಿನ ಸಾಹಿತಿಗಳು, ಕಲಾವಿದರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಖಂಡಿಸಿ ಬಸವಣ್ಣನ ಕರ್ಮಭೂಮಿ ಬೀದರ್ ನಗರದಲ್ಲಿ ವಿವಿಧ ಸಾಹಿತಿಗಳು ಮಠಾಧೀಶರು ಸೇರಿಕೊಂಡು ಬೃಹತ್ ಪ್ರತಿಭಟನೆ ನಡೆಸಿದರು.ಇತ್ತೀಚೆಗೆ ಪಠ್ಯ ಪುಸ್ತಕ ಪರಿಷ್ಕರಣೆಯ ಹೆಸರಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿದೆ.ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ನಾಡಗೀತೆಯನ್ನು ತಿರುಚಿ ಬರೆದವರ ವಿರುದ್ಧ ಸರ್ಕಾರ ತಡ ಮಾಡದೆ ಒಂದು ವಾರದೊಳಗೆ ಕ್ರಮ ಕೈಗೊಳ್ಳಬೇಕು. 9ನೆಯ ತರಗತಿಯ ಪರಿಷ್ಕೃತ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಲಿಂಗದೀಕ್ಷೆ, ಧರ್ಮ, ಚಳವಳಿ, ಸಿದ್ಧಾಂತಗಳ ಬಗ್ಗೆ ತಿರುಚಿ ಬರೆದ ಸಂಗತಿಗಳನ್ನು ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕುವೆಂಪು ಅವರಿಗೆ ಅವಮಾನಿಸಿದ್ದನ್ನ ವಿರೋಧಿಸಿ ಪ್ರತಿಭಟನೆ
Please follow and like us: