ಲಕ್ಷ್ಮೇಶ್ವರ: ದೇಶದಲ್ಲೇ ಒಂದು ಚುನಾಯಿತ ಸರಕಾರ ಯಾವ ರೀತಿ ಕಾರ್ಯಕ್ರಮಗಳನ್ನು ಕೊಡಬಹುದು ಎಂಬುದನ್ನು ಜೆಡಿಎಸ್ ಪಕ್ಷ ಪಂಚರತ್ನ ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಗೆ ತಿಳಿಸಲಿದೆ ಎಂದು ಜೆಡಿಎಸ್ ಗದಗ ಜಿಲ್ಲಾ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ತಿಳಿಸಿದ್ದಾರೆ.
ಜೆಡಿಎಸ್ ತಾಲೂಕ ಅಧ್ಯಕ್ಷ ಪದ್ಮರಾಜ ಪಾಟೀಲ್ ನೇತೃತ್ವದಲ್ಲಿ ಲಕ್ಷ್ಮೇಶ್ವರ ಪಟ್ಟಣದ ಜೆಡಿಎಸ್ ತಾಲೂಕ ಕಚೇರಿಯಲ್ಲಿ ಪಂಚರತ್ನ ಯೋಜನೆ ಬಿತ್ತಿ ಪತ್ರ ಬಿಡುಗಡೆ ಗೊಳಿಸಿ ಅವರು ಮಾತನಾಡಿದರು.
ಉಚಿತ ಶಿಕ್ಷಣ, ಉಚಿತ ಆರೋಗ್ಯ, ಪ್ರತಿ ಕುಟುಂಬಕ್ಕೆ ಉದ್ಯೋಗ, ವಸತಿ ಸೌಲಭ್ಯವನ್ನು ಒದಗಿಸಿಕೊಡುವುದು ಪಂಚರತ್ನ ಯೋಜನೆಯ ಉದ್ದೇಶಗಳಾಗಿವೆ’ ಎಂದರು.
ನಂತರ ಮಾತನಾಡಿದ ತಾಲೂಕ ಅಧ್ಯಕ್ಷ ಪದ್ಮರಾಜ ಪಾಟೀಲ್ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದು ನಿಶ್ಚಿತ ಅವರ ಹಲವಾರು ಜನಪರ ಯೋಜನೆಗಳಲ್ಲಿ ಮುಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಳೆ ಅನಾಹುತಗಳು, ಬೆಲೆಕುಸಿತದಿಂದ ಕಂಗಾಲಾಗಿರುವ ರೈತರ ಬದುಕಿಗೆ ನೆರವಾಗುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಜೊತೆಗೆ ಪ್ರತಿಕುಟುಂಬಕ್ಕೆ ಉದ್ಯೋಗ ಯೋಜನೆಯಲ್ಲಿ ಸರಕಾರಿ ಕೆಲಸವೇ ಎಂದು ಏನಿಲ್ಲ, ಸ್ವಂತ ಉದ್ಯೋಗ ಮಾಡಲು ಸರಕಾರದಿಂದಲೇ ಯುವಕರಿಗೆ ಆರ್ಥಿಕ ಬಲ ತುಂಬಲಿದ್ದೇವೆ. ಕೊನೆಯದಾಗಿ ಪ್ರತಿಕುಟುಂಬಕ್ಕೆ ವಸತಿ ಸೌಲಭ್ಯವನ್ನು ಒದಗಿಸಿಕೊಡುವುದು ನಮ್ಮ ಪಂಚರತ್ನ ಯೋಜನೆಯ ಕಾರ್ಯಕ್ರಮಗಳಾಗಿವೆ ಎಂದು ವಿವರಿಸಿದರು.
ಮುಂದಿನ ಚುನಾವಣೆ ನಮಗೆ ಆರ್ಶಿವಾದ ಮಾಡಿ ಜೆಡಿಎಸ್ ಸರ್ಕಾರ ಎಂದರೆ ನಿಮ್ಮ ಸರ್ಕಾರವಾಗಿದೆ
ಈ ಪಂಚರತ್ನ ಯೋಜನೆಗಳನ್ನು ಮುಂದಿನ ನಾಲ್ಕೈದು ತಿಂಗಳ ಕಾಲ ರಾಜ್ಯದ ಪ್ರತಿ ಮನೆಮನೆಗಳಿಗೆ ತಲುಪಿಸುವ ಉದ್ದೇಶವನ್ನು ಪಂಚರತ್ನ ರಥಯಾತ್ರೆ ಹೊಂದಿದೆ ಎಂದರು.
ಸಂದರ್ಭದಲ್ಲಿ ಎಂ.ಆರ್.ಸೊಂಪುರ, ನಜೀರ ಡಂಬಳ, ಡಾ|| ಎಸ್.ಕೆ.ಪೋಲಿಸ್ ಪಾಟೀಲ್, ಎಚ್.ಎಮ್.ನಾಯಕ, ರಮೇಶ ಕಲಬುರ್ಗಿ ಮತ್ತು ಜೆಡಿಎಸ್ ಕಾರ್ಯಕರ್ತರು ಇದ್ದರು.