ಹೈದರಾಬಾದ್: ಗಂಡನ ವರದಕ್ಷಿಣೆ ಕಿರುಕುಳ ತಾಳಲಾರದೆ ವೈದ್ಯೆಯಾಗಿದ್ದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್ನ ಮಲಕಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಮನಕಲಕುವ ಘಟನೆ ನಡೆದಿದೆ.ಗಂಡನೂ ಡಾಕ್ಟರ್, ಪತ್ನಿಯೂ ಡಾಕ್ಟರ್.ಹೀಗಿದ್ದರೂ ಗಂಡನ ಹಣದ ದಾಹ ನಿಲ್ಲಲಿಲ್ಲ. ಪದೇ ಪದೇ ತವರಿನಿಂದ ಇನ್ನಷ್ಟು ಹಣವನ್ನು ತರುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಪತ್ನಿ ಡಾ. ಸಪ್ನಾ ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ನಲ್ಗೊಂಡದ ದಾಮರಚಾರ್ಲವಾಸಿ ನಿವಾಸಿ ಸಪ್ನಾ ಮೊದಲ ಪತಿಗೆ ವಿಚ್ಛೇದನ ನೀಡಿ 2015ರ ಏಪ್ರಿಲ್ ತಿಂಗಳಲ್ಲಿ ಕರ್ನೂಲ್ನ ನಿವಾಸಿ ಉಸ್ಮಾನಿಯಾ ವೈದ್ಯಕೀಯ ಕಾಲೇಜ್ನಲ್ಲಿ ಎಂಡಿಯಾಗಿರುವ ಡಾ.ಶ್ರೀಧರ್ ಜತೆ ಎರಡನೇ ಮದುವೆಯಾಗಿದ್ದರು. ಡಾ.ಶ್ರೀಧರ್ಗೂ ಇದು ಎರಡನೆಯ ಮದುವೆ. ಮದುವೆಯ ಸಂದರ್ಭದಲ್ಲಿ ಸಪ್ನಾ ಮನೆಯವರು 10 ಲಕ್ಷ ರೂ. ನಗದು ಹಾಗೂ 14 ತೊಲ ಚಿನ್ನಾಭರಣ ನೀಡಲಾಗಿತ್ತು.ಇಷ್ಟಾದರೂ ಆತನ ಹಣದ ದಾಹ ನಿಂತಿರಲಿಲ್ಲ. ಒಂದು ವರ್ಷದಿಂದಲೂ ಹೆಂಡತಿಗೆ ವರದಕ್ಷಿಣೆ ವಿಚಾರವಾಗಿ ನಿತ್ಯ ಮಾನಸಿಕ, ದೈಹಿಕ ಕಿರುಕುಳ ನೀಡಲು ಶುರು ಮಾಡಿದ್ದ. ಇದರಿಂದ ಡಾ.ಸಪ್ನಾ ಮೊದಲಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಆಕೆಯ ಪಾಲಕರು ಮನೋವೈದ್ಯರ ಬಳಿ ಕರೆದುಕೊಂಡು ಹೋಗಿ ಕೌನ್ಸೆಲಿಂಗ್ ಮಾಡಿಸಿದ್ದರು. ತಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರಲ್ಲಿ ದೂರು ಕೂಡ ನೀಡಿದ್ದರು. ಆದರೂ ಕಿರುಕುಳ ಮುಂದುವರೆದಿದ್ದರಿಂದ ಸ್ವಪ್ನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada