ರಾಜ್ಯ ರಾಜಕಾರಣಿ ದಲ್ಲಿ ತೀವ್ರ ಕೂತಲ ಮೂಡಿಸಿದ ಲಕ್ಷ್ಮಣ ಸವದಿ.ನಡೆ….!

ರಾಜ್ಯ ರಾಜಕಾರಣಿ ದಲ್ಲಿ ತೀವ್ರ ಕೂತಲ ಮೂಡಿಸಿದ ಲಕ್ಷ್ಮಣ ಸವದಿ.ನಡೆ. ಬಿಜೆಪಿಗೆ ರಾಜಿನಾಮೆ ನಿರ್ಧಾರ ಪ್ರಕಟಿಸಿದ ಲಕ್ಷ್ಮಣ ಸವದಿ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮಾಜಿ ಶಾಸಕ ರಾಜು ಕಾಗೆ ಅವರು ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ. ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ರಾಜು ಕಾಗೆ, ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು,  ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ ಪಕ್ಷಕ್ಕೆ  ಬರಮಾಡಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ. ಲಕ್ಷ್ಮಣ ಸವದಿ ನಿವಾಸಕ್ಕೆ ಕಾಗವಾಡ ಕಾಂಗ್ರೆಸ್ ಮಾಜಿ ಶಾಸಕ ರಾಜು ಕಾಗೆ ಭೇಟಿ ನೀಡಿ..ಕೆಲ ಕಾಲ ಚರ್ಚೆ ನಡೆಸಿದ್ದಾರೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸವದಿ, ಟಿಕೆಟ್ ವಂಚಿಸಿದ ಪಕ್ಷದಲ್ಲಿ ಇರಲು ಸಾಧ್ಯವಿಲ್ಲ. ಹಾಗಾಗಿ ಬಿಜೆಪಿಯ (BJP) ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವೆ.  ನಾಳೆ ಮತದಾರರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ರು…!

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕ್ರಾಂತಿಕಿರಣ್‌ಗೆ ಸಂಕಷ್ಟ.

Wed Apr 12 , 2023
ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕ್ರಾಂತಿಕಿರಣ್‌ಗೆ ಸಂಕಷ್ಟ. ನಕಲಿ ದಾಖಲೆ ಸೃಷ್ಟಿ ಮಾಡಿ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣಾಗೆ ಸ್ಪರ್ಧಿಸುತ್ತಿರುವ ಆರೋಪ. ಚುನಾವಣೆಗೆ ನಿಲ್ಲಲು ಜಾತಿ ಫೇಕ್ ಸರ್ಟಿಫಿಕೇಟ್ ಪಡೆದ್ರಂತೆ ಬಿಜೆಪಿ ಅಭ್ಯರ್ಥಿ ಡಾ ಕ್ರಾಂತಿಕಿರಣ್ ಸರ್ಕಾರಿ ಸೇವೆಗೆ ಸಲ್ಲಿಸಿದ್ದ ದಾಖಲೆಯೇ ಬೇರೆ. ಪ್ರಸ್ತುತ ದಾಖಲೆಯೇ ಬೇರೆ ಎಂದು ಆರೋಪ…! ಸರ್ಕಾರಿ ಸೇವೆ ದಾಖಲೆಯಲ್ಲಿ ಜಾತಿ ಕಾಲಂನಲ್ಲಿ ಹಿಂದೂ ಒಕ್ಕಲಿಗ ಎಂದು ನಮೂದಿ ಯಾಗಿದೆ , ಇನ್ನೂ […]

Advertisement

Wordpress Social Share Plugin powered by Ultimatelysocial