ಉದ್ಯೋಗಕ್ಕಾಗಿ ಭೂ ಹಗರಣ !

ದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಹಾರದ 15 ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳ ಶೋಧ ನಡೆಸುತ್ತಿದ್ದಾರೆ.

ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಉಡುಗೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇತ್ತೀಚೆಗಷ್ಟೇ ಬಿಹಾರ ಮಾಜಿ ಸಿಎಂ ರಾಬ್ದಿ ದೇವಿ ಹಾಗೂ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ ಅವರನ್ನು ವಿಚಾರಣೆ ನಡೆಸಿದ್ದರು.

ಸಿಬಿಐ ಅಧಿಕಾರಿಗಳು ದಾಖಲಿಸಿರುವ ಎಫ್‌ಐಆರ್ ಆಧರಿಸಿ ಇಡಿ ಅಧಿಕಾರಿಗಳು ಇಂದು 15 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಲಾಲು ಪ್ರಸಾದ್ ಅವರ ಸಂಬಂಧಿಕರ ನಿವಾಸಗಳಲ್ಲೂ ಶೋಧ ನಡೆಸಲಾಗಿದೆ.

ದೆಹಲಿಯಲ್ಲಿರುವ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಮತ್ತು ಬಿಹಾರದ ಆರ್‌ಜೆಡಿ ನಾಯಕ ಮತ್ತು ಮಾಜಿ ಶಾಸಕ ಅಬು ದೋಜಾನಾ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಮಾಹಿತಿ ಸಿಕ್ಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆತಂಕ ಸೃಷ್ಟಿಸಿದ ವೈರಸ್‌ಗೆ ಕರ್ನಾಟಕದಲ್ಲಿ ಮೊದಲ ಬಲಿ...!

Fri Mar 10 , 2023
ಹಾಸನ, ಮಾರ್ಚ್‌, 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಚ್‌ 1 ಎನ್‌ 1 ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿದ್ದು, ಇದರ ಜೊತೆಗೆ ಎಚ್‌3 ಎನ್‌2 ಪ್ರಕರಣಗಳು ಕೂಡ ಹೆಚ್ಚಾಗುತ್ತಲೇ ಇವೆ. ಈ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯಲ್ಲಿ H3N2ಗೆ ಮೊದಲ ಬಲಿ ಆಗಿರುವ ಪ್ರಕರಣ ದಾಖಲಾಗಿದೆ. ಈ ಸೋಂಕಿನಿಂದ ಹಾಸನ ಜಿಲ್ಲೆಯ ಆಲೂರಿನಲ್ಲಿ 78 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾರ್ಚ್ 1 ರಂದು ಇವರು ಮೃತಪಟ್ಟಿದ್ದು, […]

Advertisement

Wordpress Social Share Plugin powered by Ultimatelysocial