ಕರ್ನಾಟಕ ರಾಜ್ಯ ಭೂಮಾಪನಾ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಸಿ.ಎನ್.ಶ್ರೀಧರ್ ಐಎಎಸ್ ಅವರನ್ನು ರಾಜ್ಯ ಭೂಮಾಪನ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶ್ರೀಕಂಠ, ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಭೂಮಾಪನಾ ಇಲಾಖೆ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷ ಜಿ.ಸುರೇಶ್ಬಾಬು ಮತ್ತಿತರರು ಸನ್ಮಾನಿಸಿದರು.ಈವರೆಗೂ ಆಯುಕ್ತರಾಗಿದ್ದ ಮನೀಶ್ ಮೌದ್ಗಿಲ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶ್ರೀಧರ್ ಬಂದಿದ್ದು, ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಭೂಮಾಪನಾ ಇಲಾಖೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್, ರಾಜ್ಯ ಸಂಚಾಲಕ ಪಿ.ರಂಗಸ್ವಾಮಿ, ಜಂಟಿ ಕಾರ್ಯದಶಿ ಚೇತನ್ ಮಧುರೆ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಶಿವರುದ್ರಯ್ಯ, ವಿಭಾಗೀಯ ಅಧ್ಯಕ್ಷ ಡೇವಿಡ್ ದೇವರಾಜ್, ಮಹಿಳಾ ಅಧ್ಯಕ್ಷೆ ಗೀತಾಮಣಿ, ಕೋಲಾರ ಜಿಲ್ಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಅಜಯ್ಕುಮಾರ್ ಮತ್ತಿತರರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada