ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಕಲಿಕೆ ಯೋಜನೆಯಡಿಯಲ್ಲಿ ಐಸಿಟಿ/ಸ್ಮಾರ್ಟ್ ಕ್ಲಾಸ್ ರೂಮ್ಗಳ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಮ್.ಮುಂದಿನ ನೆರವೇರಿಸಿದರು.
ನಂತರ ಮಾತನಾಡಿದ ಅವರು ಪ್ರಸ್ತುತ ಶಿಕ್ಷಣದ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಗೆ ಹೆಚ್ಚಿನ ಮಹತ್ವವನ್ನು ಕೊಟ್ಟಿದ್ದು ಅದಕ್ಕನುಗುಣವಾಗಿ ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆ ಸಾಕಷ್ಟು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಡಿಜಿಟಲ್ ಕಲಿಕೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಮಾರ್ಟ್ ಕ್ಲಾಸ್ ಅತ್ಯವಶ್ಯಕವಾಗಿದ್ದು ಇದರ ಪ್ರಯೋಜನ ವಿದ್ಯಾರ್ಥಿಗಳು ಪಡೆದುಕೊಳ್ಳಲಿ, ಎಂದು ಹಾರೈಸಿದರು.
ವಿದ್ಯಾರ್ಥಿಗಳಿಗೆ ಆಯಾ ವಿಷಯದ ಪಠ್ಯವನ್ನು ಚಿತ್ರದೊಂದಿಗೆ ಶಿಕ್ಷ ಕರು ಗಣಕಯಂತ್ರದ ಸಹಾಯದಿಂದ ಸುಲಲಿತವಾಗಿ ಗೋಡೆಯ ಮೇಲೆ ತೋರಿಸಿ ಪಾಠ ಮಾಡುವುದರಿಂದ ಮಕ್ಕಳಿಗೆ ಮನನ ಮಾಡಿಕೊಳ್ಳಲು ಅನುಕೂಲವಾಗಲಿದೆ. ಇದೇ ರೀತಿ ತಾಲೂಕಿನ ಬಹುತೇಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಮಾಡುವ ವಿಧಾನ ಅನುಸರಿಸಲು ಮುಂದಾದರೇ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: