ಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ ಎಂದು ಶಿರಹಟ್ಟಿ ವೃತ್ತದ ಸಿಪಿಐ ವಿಕಾಶ ಕಳವಳ ವ್ಯಕ್ತಪಡಿಸಿದರು.
ಲಕ್ಷ್ಮೇಶ್ವರ ಪಟ್ಟಣದ ಬಿಸಿಎನ್ ವಿದ್ಯಾಸಂಸ್ಥೆಯಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕವಾಗಿದ್ದು, ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.
ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸ್ವಯಂ ಪ್ರೇರಣೆಯಿಂದ ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸಬೇಕು. ಶಿಕ್ಷಣದ ನಂತರದಲ್ಲಿ ಉತ್ತಮ ಜೀವನ ರೂಪಿಸಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: