ಹುಬ್ಬಳ್ಳಿ: ಹು-ಧಾ ಅವಳಿ ನಗರದಲ್ಲಿ ಸಮರ್ಪಕ ಕುಡಿಯುವ ನೀರು ಒದಗಿಸಬೇಕು ಎಂದು ಒತ್ತಾಯಿಸಿ ನಗರದ ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿಂದು ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಂತರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಪಕ್ಷದ ಮುಖಂಡರು, ಕಳೆದ ೨-೩ ತಿಂಗಳಿನಿಂದ ಹು-ಧಾ ಅವಳಿನಗರದಲ್ಲಿ ಜನರು ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದೇ ಜನರು ತೊಂದರೆ ಅನುಭವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ನೀರಿಗಾಗಿ ಅವಳಿನಗರದಲ್ಲಿ ಸಮಸ್ಯೆ ಪರಿಹಾರವಾಗದೇ ಇರುವುದು ದುರದೃಷ್ಟಕರ ಸಂಗತಿಯಾಗಿದ್ದು, ದಿನಕಳೆದಂತೆ ಸಮಸ್ಯೆ ತೀವ್ರವಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.ನೀರಿನ ಸಮಸ್ಯೆಯಿಂದಾ ಅವಳಿ ನಗರದ ಜನತೆ ತಾಳ್ಮೆ ಕಳೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಮುಂದಾಗುವ ಮುಂಚೆ ನೀರಿನ ಸಮಸ್ಯೆ ಬಗೆಹರಿಸಿ ಸಮರ್ಪಕ ನೀರು ಒದಗಿಸಬೇಕೆಂದು ಆಗ್ರಹಿಸಿದರು.ಒಂದು ವೇಳೆ ಸಮಸ್ಯೆ ಹೀಗೆ ಮುಂದುವರೆದರೇ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆಗೆ ಮುಂದಾಗುತ್ತೇವೆಂದು ಎಚ್ಚರಿಕೆ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…