ಬಾಕಿ ಸಾಲ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಮನ್ನಾಮಾಡ್ತಿನಿ.

ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಎಚ್ಡಿಕೆ ಭರವಸೆ.ನಮ್ಮ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನಾನು ಈ ಹಿಂದೆ ಸಾಲಮನ್ನಾ ಮಾಡಿದಾಗ ತಾಂತ್ರಿಕ ಸಮಸ್ಯೆಯಿಂದ ಬಾಕಿ ಇರುವ ರೈತರ ಸಾಲವನ್ನು ನಾನು ಮನ್ನಾ ಮಾಡ್ತಿನಿ. ಬಿಜೆಪಿಯೊಂದಿಗಿನ 20 ತಿಂಗಳು, ಕಾಂಗ್ರೆಸ್ ನೊಂದಿಗಿನ 14 ತಿಂಗಳ ಸಮಿಶ್ರ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಮಾಡಿದ್ದೆನೆ. ಪುರ್ಣ ಬಹುಮತದ ಸರ್ಕಾರ ಬಂದ್ರೆ ರೈತರ ಸಾಲ ಮನ್ನಾ ಮಾಡುವುದಾಗಿ ಕುಮಾರ್ ಸ್ವಾಮಿ ಹೇಳಿದರು.ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮೋರ್ಖಂಡಿ ಗ್ರಾಮದಲ್ಲಿ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರುಸ್ತ್ರೀ ಶಕ್ತಿ ಸಂಘಗಳ ಸಾಲವನ್ನು 24 ಗಂಟೆಯೊಳಗೆ ಮನ್ನಾ ಮಾಡ್ತಿನಿ. ರೈತರ, ಬಡವರ, ಶ್ರಮಿಕರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತೇನೆ.
ಬಡವರ ಸಮಸ್ಯೆಗಳ ಪರಿಹಾರಕ್ಕಾಗಿ ನಮ್ಮ ಸರ್ಕಾರವನ್ನು ನಿವೆಲ್ಲರೂ ಸೇರಿ ತನ್ನಿ. ನಿಮ್ಮೆಲ್ಲರ ಸಮಸ್ಯೆಗಳನ್ನು ನಾನು ಪರಿಹರಿಸುತ್ತೇನೆ. ನಿಮ್ಮ ಮನೆ ಬಾಗಿಲಿಗೆ ನಾವು ಸೇವೆ ಒದಗಿಸುತ್ತೇವೆ.
ಭೂಮಿ ಇಲ್ಲದ ಕಾರ್ಮಿಕರಿಗೆ ಕೂಡ ಅನೇಕ ತರಬೇತಿಗಳನ್ನು ನೀಡಿ ಅವರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ಕೆಲಸ ಮಾಡುತ್ತೇನೆ.
ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಸೈಯದ್ ಯಶ್ರಬ್ ಅಲಿ ಖಾದ್ರಿಯನ್ನು ಗೆಲ್ಲಿಸುವ ಮೂಲಕ ನಮ್ಮ ಕೈ ಬಲಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿರವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಸವಲಿಂಗಯ್ಯ ಹಿರೇಮಠ ಜನಪದ ಕಲಾವಿದ

Mon Jan 9 , 2023
ಬಸವಲಿಂಗಯ್ಯ ಹಿರೇಮಠ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ಗ್ರಾಮದಲ್ಲಿ 1959ರಲ್ಲಿ ಜನಿಸಿದರು. ತಮ್ಮ ಐದನೇ ವಯಸ್ಸಿನಲ್ಲಿಯೇ ಹಾರ್ಮೋನಿಯಮ್‌ ನುಡಿಸುತ್ತ ಭಜನೆ ಸಂಗೀತದಲ್ಲಿ ಪಾಲ್ಗೊಳ್ಳುತ್ತಿದ್ದರು. ಶಾಲಾ, ಕಾಲೇಜು ದಿನಗಳಲ್ಲಿ ಗ್ರಾಮೀಣ ರಂಗಭೂಮಿ ನಾಟಕಗಳಲ್ಲಿ ನಟನಾಗಿ, ಹಾಡುಗಾರನಾಗಿ ರಾಜ್ಯಾದ್ಯಂತ ಸಂಚರಿಸಿ ಪ್ರದರ್ಶನ ನೀಡಿದ್ದರು. ಜಾನಪದ ವಿಷಯವನ್ನು ಆಯ್ದುಕೊಂಡು ಎಂ. ಎ. ಪದವಿ ಗಳಿಸಿದ್ದರು. ಬಸವಲಿಂಗಯ್ಯ ಹಿರೇಮಠ ನಟ, ಗಾಯಕ, ಸಂಗೀತ ನಿರ್ದೇಶಕ ಹೀಗೆ ಹತ್ತು ಹಲವು ಪ್ರತಿಭಾನ್ವಿತ ರೂಪ ತಳೆದಿದ್ದವರು.‍ ಇವರು […]

Advertisement

Wordpress Social Share Plugin powered by Ultimatelysocial